Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Saturday, February 7
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ಭದ್ರಾ ಜಲಾಶಯವ ವಿಶ್ವೇಶ್ವರಯ್ಯ ಜಲ ನಿಗಮ ವ್ಯಾಪ್ತಿಗೆ ಒಳಪಡಿಸಿ: ಬಿ.ಎ.ಲಿಂಗಾರೆಡ್ಡಿ ಆಗ್ರಹ
Uncategorized

ಭದ್ರಾ ಜಲಾಶಯವ ವಿಶ್ವೇಶ್ವರಯ್ಯ ಜಲ ನಿಗಮ ವ್ಯಾಪ್ತಿಗೆ ಒಳಪಡಿಸಿ: ಬಿ.ಎ.ಲಿಂಗಾರೆಡ್ಡಿ ಆಗ್ರಹ

KumarBy KumarJanuary 16, 2026Updated:January 16, 2026No Comments3 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

ಭದ್ರಾ ಜಲಾಶಯವ ವಿಶ್ವೇಶ್ವರಯ್ಯ ಜಲ ನಿಗಮ ವ್ಯಾಪ್ತಿಗೆ ಒಳಪಡಿಸಿ: ಬಿ.ಎ.ಲಿಂಗಾರೆಡ್ಡಿ ಆಗ್ರಹ

ಚಿತ್ರದುರ್ಗ ಹೊಯ್ಸಳ ನ್ಯೂಸ್/
ಚಿತ್ರದುರ್ಗ:

ಮಧ್ಯ ಕರ್ನಾಟಕದ ಬಯಲು ಸೀಮೆ ರೈತಾಪಿ ಸಮುದಾಯದ ಜೀವನಾಡಿಯಾಗಿರುವ ಭದ್ರಾ ಜಲಾಶಯವನ್ನು ವಿಶ್ವೇಶ್ವರಯ್ಯ ಜಲ ನಿಗಮ(ವಿಜೆಎನ್ ಎಲ್ ) ದ ವ್ಯಾಪ್ತಿಗೆ ಒಳಪಡಿಸುವ ತನ್ನ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬಾರದೆಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಆಗ್ರಹಿಸುತ್ತದೆ.

ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಹಾಲಿ ಭದ್ರಾ ಜಲಾಶಯ ಕರ್ನಾಟಕ ನೀರಾವರಿ ನಿಗಮದ ಅಡಿಯಲ್ಲಿದೆ. ಭದ್ರಾ ಮೇಲ್ದಂಡೆ ಕಾಮಗಾರಿಗಳು ವಿಶ್ವೇಶ್ವರಯ್ಯ ನೀರಾವರಿ ನಿಗಮದಿಂದ ನಿರ್ವಹಣೆಗೆ ಒಳಪಟ್ಟಿದ್ದು ಭವಿಷ್ಯದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ನೀರು ಪಡೆಯಬೇಕಾದರೆ ಎರಡು ನಿಗಮಗಳ ನಡುವೆ ಸಂಘರ್ಷ ಸೃಷ್ಟಿಯಾಗುವ ಸಾಧ್ಯತೆ ಇರುತ್ತದೆ. ಎರಡೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ(ಎಂಡಿಗಳು) ನಡುವೆ ಒಮ್ಮತ ಮೂಡದೇ ಇರಬಹುದು. ಹಾಗಾಗಿ ಭದ್ರಾ ಜಲಾಶಯವ ವಿಶ್ವೇಶ್ವರಯ್ಯ ಜಲ ನಿಗಮದ ವ್ಯಾಪ್ತಿಗೆ ಒಳಪಡಿಸಿ ಒಬ್ಬರೇ ವ್ವವಸ್ಥಾಪಕ ನಿರ್ದೇಶಕರ ನಿರ್ವಹಣೆ ಮಾಡುವ ರೀತಿಯಲ್ಲಿ ಇರಬೇಕೆಂದರು.
ಈ ಸಂಬಂಧ ನಿೀರಾವರಿ ಅನುಷ್ಠಾನ ಹೋರಾಟ ಸಮಿತಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ವಿಜೆಎನ ಎಲ್ ವ್ಯವಸ್ಥಾಪಕ ನಿರ್ದೇಶಕ ಸಣ್ಣ ಚಿತ್ತಯ್ಯ ಅವರಿಗೆ ಮನವಿ ಮಾಡಿಕೊಂಡಿತ್ತು. ಭದ್ರಾ ಜಲಾಶಯದ ಕಾಡ ಸಮಿತಿಯಲ್ಲಿ ಚಿತ್ರದುರ್ಗ ಜಿಲ್ಲೆಗೂ ಸೂಕ್ತ ಸ್ಥಾನ ಮಾನಬೇಕು ಎಂಬ ಬೇಡಿಕೆ ಮಂಡಿಸಿತ್ತು.ಈ ನಿಟ್ಟಿನಲ್ಲಿ ಕಾರ್ಯತತ್ಪರರಾಗಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಭದ್ರಾ ಜಲಾಶಯವ ಕರ್ನಾಟಕ ನೀರಾವರಿ ನಿಗಮ ವ್ಯಾಪ್ತಿಯಿಂದ ಹೊರ ತೆಗೆದು ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಸೇರ್ಪಡಿಸುವ ತೀರ್ಮಾನ ಕೈಗೊಂಡು ಆ ನಿಟ್ಟಿನಲ್ಲಿ ಮುಂದಡಿ ಇಟ್ಟಿದ್ದರು.
ಈ ಸುಳಿವು ಅರಿತ ದಾವಣಗೆರೆ ಜಿಲ್ಲೆಯ ಕ್ಯಾತೆ ಶೂರ ರೇಣುಕಾಚಾರ್ಯ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿ ಯಾವುದೇ ಕಾರಣದಿಂದ ಕರ್ನಾಟಕ ನೀರಾವರಿ ನಿಗಮದಿಂದ ವಿಜೆಎನ್ ಎಲ್ ಗೆ ಭದ್ರಾ ಜಲಾಶಯವ ಶಿಫ್ಟ್ ಮಾಡಲು ಅವಕಾಶ ಕೊಡುವುದಿಲ್ಲವೆಂದು ಹೇಳಿಕೆ ನೀಡಿ ಉಭಯ ಜಿಲ್ಲೆಯ ರೈತರ ನಡುವೆ ಸಂಘರ್ಷ ಸೃಷ್ಟಿ ಮಾಡಲು ಮುಂದಾಗಿದ್ದಾರೆ. ರೇಣುಕಾಚಾರ್ಯರ ಈ ನಡೆಯನ್ನು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಉಗ್ರವಾಗಿ ಖಂಡಿಸುತ್ತದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆಯಡಿ ತುಂಗಾ ಜಲಾಶಯದಿಂದ 17.4 ಟಿಎಂಸಿ ಹಾಗೂ ಭದ್ರಾ ಜಲಾಶಯದಿಂದ 12.5 ಟಿಎಂಸಿ ಸೇರಿ ಒಟ್ಟು 29.9 ಟಿಎಂಸಿಯಷ್ಟು ನೀರನ್ನು ಹಂಚಿಕೆ ಮಾಡಲಾಗಿದೆ. ತುಂಗಾ ಜಲಾಶಯದಿಂದ ನೀರು ಲಿಪ್ಟ್ ಮಾಡಿ ಭದ್ರಾ ಜಲಾಶಯಕ್ಕೆ ಹಾಕಿಕೊಂಡು ನಂತರ ಕಾಲುವೆಗೆ ಹರಿಸಲಾಗುತ್ತದೆ. ಹಾಗಾಗಿ ಭದ್ರಾ ಜಲಾಶಯದ ಮೇಲೆ ಹೆಚ್ಚು ಅವಲಂಬನೆ ಇದೆ. ಜಲಾಶಯವ ಒಂದೇ ನಿಗಮ ನಿರ್ವಹಣೆ ಮಾಡಿದ್ದಲ್ಲಿ ತೊಂದರೆ ಆಗುವುದಿಲ್ಲ. ಚಿತ್ರದುರ್ಗ, ಚಿಕ್ಕಮಗಳೂರು, ಜಗಳೂರು, ತುಮಕೂರು ಜಿಲ್ಲೆಯ ರೈತರು ಯಾವುದೇ ಸಂಘರ್ಷಕ್ಕೆ ಇಳಿಯದೇ ಭದ್ರಾ ಜಲಾಶಯದಿಂದ ನೀರು ಪಡೆಯಬಹುದಾಗಿದೆ. ರಾಜ್ಯ ಸರ್ಕಾರ ಭದ್ರಾ ಜಲಾಶಯವ ನೀರಾವರಿ ನಿಗಮದ ವ್ಯಾಪ್ತಿಯಿಂದ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಸೇರಿಸುವ ತನ್ನ ನಿಲುವಿನಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು. ಹಾಗೊಂದು ವೇಳೆ ಒತ್ತಡಕ್ಕೆ ಮಣಿದು ನೀರಾವರಿ ನಿಗಮದ ವ್ಯಾಪ್ತಿಯಲ್ಲಿ ಉಳಿಸಿದರೆ ಮಧ್ಯ ಕರ್ನಾಟಕದ ರೈತರ ಆಕ್ರೋಶ ಎದುರಿಸಬೇಕಾಗುತ್ತದೆ , ಹೋರಾಟದ ಹಾದಿ ತುಳಿಯಬೇಕಾಗುತ್ತದೆ ಎಂದು ಲಿಂಗಾರೆಡ್ಡಿ ಎಚ್ಚರಿಸಿದರು.

ದೈನೇಸಿ ಸ್ಥಿತಿ ಬಿಡಿ, ಹಕ್ಕೊತ್ತಾಯ ಮಂಡಿಸಿ

ಭದ್ರಾ ಮೇಲ್ದಂಡೆ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು ಯೋಜನೆ ವ್ಯಾಪ್ತಿಯ ಜನ ಪ್ರತಿನಿಧಿಗಳು ಅನುದಾನಕ್ಕಾಗಿ ರಾಜ್ಯ ಸರ್ಕಾರದ ಮುಂದೆ ದೈನೇಸಿಯಾಗಿ ಕೈ ಕಟ್ಟಿ ನಿಲ್ಲದೆ ಹಕ್ಕೊತ್ತಾಯ ಮಂಡಿಸುವಂತೆ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಆಗ್ರಹಿಸುತ್ತದೆ.
ಕಳೆದ ವಾರ ಸಚಿವ ಡಿ.ಸುಧಾಕರ್ ನೇತೃತ್ವದಲ್ಲಿ ಜಿಲ್ಲೆಯ ಶಾಸಕರುಗಳು ಕಾಮಗಾರಿ ಪರಿಶೀಲನೆ ನಡೆಸಿದ್ದು ವಾರದೊಳಗೆ ಸಿಎಂ, ಡಿಸಿಎಂ ಭೇಟಿ ಮಾಡಿ 200 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿಸಿಕೊಂಡು ಫೆಬ್ರವರಿ ಅಂತ್ಯದ ಒಳಗೆ ಗೋನೂರು ಕೆರೆ ವರೆಗೆ ಪರೀಕ್ಷಾರ್ಥ(ಟ್ರಯಲ್) ನೀರು ಹರಿಸುವುದಾಗಿ ಹೇಳಿದ್ದರು.
ಆದರೆ ಇದುವರೆಗೂ ಸಿಎಂ ಹಾಗೂ ಡಿಸಿಎಂ ಭೇಟಿ ಮಾಡುವ ನಿಟ್ಟಿನಲ್ಲಿ ಸಚಿವ, ಶಾಸಕರು ಪ್ರಯತ್ನ ನಡೆಸಿಲ್ಲ. ಜಿಲ್ಲೆಯ ಜನ ಪ್ರತಿನಿಧಿಗಳ ಇಚ್ಚಾಶಕ್ತಿ ಕೊರತೆಯ ದುರ್ಬಲ ಮನಸ್ಥಿತಿಯ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಖಂಡಿಸುತ್ತದೆ. ರಾಜ್ಯ ಸರ್ಕಾರವ ಬೇಡಿಕೊಳ್ಳುವ ಪರಿಸ್ಥಿತಿಯಿಂದ ಹೊರ ಬಂದು ಹಕ್ಕೊತ್ತಾಯ ಮಂಡಿಸುವಂತೆ ಲಿಂಗಾರೆಡ್ಡಿ ಒತ್ತಾಯಿಸಿದರು.
ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ, ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ, ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನ ಮಾಳಿಗೆ ಧನಂಜಯ, ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಮಲ್ಲಾಪುರ ತಿಪ್ಪೇಸ್ವಾಮಿ, ಮಾಜಿ ಅಧ್ಯಕ್ಷ ಬಸ್ತಿಹಳ್ಳಿ ಸುರೇಶ್ ಬಾಬು ಸುದ್ದಿಗೋಷ್ಟಿಯಲ್ಲಿದ್ದರು.

Share. Facebook Twitter Pinterest LinkedIn Tumblr Email
Previous Articleಭದ್ರಾ ಜಲಾಶಯವ ವಿಶ್ವೇಶ್ವರಯ್ಯ ಜಲ ನಿಗಮ ವ್ಯಾಪ್ತಿಗೆ ಒಳಪಡಿಸಿ: ಬಿ.ಎ.ಲಿಂಗಾರೆಡ್ಡಿ ಆಗ್ರಹ
Next Article Ruletka Doświadczenie Gra – Recenzja Kasyna Online
Kumar
  • Website

Related Posts

Gambling Establishment Free Slot Machine: Your Guide to the Exciting Globe of Online Betting

February 7, 2026

Leading Rated Online Online Casinos: A Comprehensive Guide

February 6, 2026

The Most Effective Bitcoin Gambling Establishments: A Safe and Secure Method to Gamble Online

February 6, 2026
Leave A Reply Cancel Reply

Search
Tags
Apartment guides best VoltageBet games Biggest fashion angel Book of Dead at VoltageBet Brave Business Cheapest flights Civil societies culture Culture tips Fashion Feature featured fitness Flight scanners Food Good stock quotes Instant deposit bonus Instant free spins leisure Lifestyle Link Luxury homes Makeup artists MrXbet slots review Music NetBet withdrawal options play Starburst VoltageBet Preventative medicines Sports Staff Pick Studio apartments Tech Tech reviews Topic Trending Trip activities Unbelievable home decor Vaccination schedules VoltageBet bonus review VoltageBet crypto deposits VoltageBet deposit bonus VoltageBet PayPal casino VoltageBet slots review Weight loss meal plans

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

Mines Casino Fast Exciting Gameplay

Casino Hotels in Kansas City

Gambling Establishment Free Slot Machine: Your Guide to the Exciting Globe of Online Betting

Fan Duel Casino Experience

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

Mines Casino Fast Exciting Gameplay

February 7, 2026

Casino Hotels in Kansas City

February 7, 2026

Gambling Establishment Free Slot Machine: Your Guide to the Exciting Globe of Online Betting

February 7, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.