ಶೈಕ್ಷಣಿಕ ಪ್ರಗತಿಗೆ 100 ಕೋಟಿ ಮಂಜೂರು-ಶಾಸಕ ಬಿ.ಜಿ. ಗೋವಿಂದಪ್ಪ
ಜಾಹಿರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿ: 6362053469
ಚಿತ್ರದುರ್ಗ ಹೊಯ್ಸಳ ನ್ಯೂಸ್/
ಹೊಸದುರ್ಗ :
ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 6.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನೆ ಮತ್ತು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಹಾಗೂ ಆಹಾರ ನಾಗರಿಕ ಸರಬರಾಜು ನಿಗಮ ಮಂಡಳಿಯ ಅಧ್ಯಕ್ಷರಾದ ಬಿ.ಜಿ.ಗೋವಿಂದಪ್ಪ ಉದ್ಘಾಟನೆ ಮಾಡಿ ಮಾತನಾಡಿದರು.
ಶೈಕ್ಷಣಿಕ ಪ್ರಗತಿಗಾಗಿ 100 ಕೋಟಿ ಹಣ ಮಂಜೂರಾಗಿದೆ, ಮಸಣೆಹಳ್ಳಿ ಲಂಬಾಣಿಹಟ್ಟಿ ಸಮೀಪದಲ್ಲಿ ಕಾರ್ಮಿಕರ ಮಕ್ಕಳಿಗಾಗಿ 40 ಕೋಟಿ ವೆಚ್ಚದಲ್ಲಿ ವಸತಿ ಶಾಲೆ, ಪಟ್ಟಣದ ಡಿಪ್ಲೋಮೋ ಕಾಲೇಜ್ ಸಮೀಪದ 50 ಕೋಟಿ ರೂ ವೆಚ್ಚದಲ್ಲಿ ಜಿಟಿ ಜಿಸಿ ಕಾಲೇಜ್, ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ 39 ಕೋಟಿ ರೂ ಹಣವನ್ನು ಮಂಜೂರು ಮಾಡಲಾಗಿದೆ ಎಂದು ಹೇಳಿದರು.
ಕಳೆದ 30 ವರ್ಷಗಳಿಂದ ರಾಜಕೀಯ ಜೀವನದಲ್ಲಿದ್ದು.
6 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದೇನೆ ನನ್ನ ಮೇಲೆ ನಂಬಿಕೆ ಇಟ್ಟು 4 ಬಾರಿ ಶಾಸಕರಾಗಿ ಆಡಳಿತ ನಡೆಸಲು ಕ್ಷೇತ್ರದ ಜನತೆ ಅವಕಾಶ ನೀಡಿದ್ದಾರೆ. ಎಂದಿಗೂ ಅಧಿಕಾರ ದುರುಪಯೋಗ ಪಡಿಸಿಕೊಳ್ಳಲಾರೆ, ಅಧಿಕಾರದಲ್ಲಿ ಇರುವವರೆಗೂ ಪ್ರಮಾಣಿಕವಾಗಿ ಜನರ ಸೇವೆ ಮಾಡುವೆ, ಶಿಕ್ಷಣ ಕ್ಷೇತ್ರದಲ್ಲಿ ಹೊಸದುರ್ಗವನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿಸುವ ಪ್ರಾಮಾಣಿಕ ಕೆಲಸ ಮಾಡುವೆ ಎಂದರು.
ಸಮಾಜ ಕಲ್ಯಾಣ ಇಲಾಖೆಯ ಸಹ ನಿರ್ದೇಶಕ ಗೋಪಾಲಪ್ಪ ಪ್ರಾಥಮಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪುರಸಭೆಯ ಅಧ್ಯಕ್ಷೆ ರಾಜೇಶ್ವರಿ,ಉಪಾಧ್ಯಕ್ಷೆ ಗೀತಾ,ಕೆಡಿಪಿ ಸದಸ್ಯ ಲೋಕೇಶ್ವರಪ್ಪ, ಜಿಲ್ಲಾ ಮಟ್ಟದ ಪ್ರಚಾರ ಸಮಿತಿಯ ಸದಸ್ಯ ಹನುಮಂತ ನಾಯಕ, ತಾಲೂಕು ಪಂಚಾಯಿತಿ ಕಾರ್ಯಾ ನಿರ್ವಹಣಾ ಅಧಿಕಾರಿ ಸುನಿಲ್ ಕುಮಾರ್, ಕಾರ್ಯಪಾಲಕ ಅಭಿಯಂತರ ಬಿ.ಆರ್. ಮಂಜುನಾಥ್, ಇಂಜಿನಿಯರ್ ಬಿ. ತಿಪ್ಪೇಸ್ವಾಮಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶಾಂತಪ್ಪ, ಬಿಸಿಎಂ ಅಧಿಕಾರಿ ಪ್ರದೀಪ್, ಪದವಿ ಕಾಲೇಜಿನ ಪ್ರಾಂಶುಪಾಲ ಅಶ್ವತ್ ಯಾದವ್, ಸಮಾಜ ಕಲ್ಯಾಣ ಇಲಾಖೆ ನಿಲಯದ ಮೇಲ್ವಿಚಾರಕ ಅಜ್ಜಪ್ಪ,ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧಿಕ್ಷಕ ಓಂಕಾರಪ್ಪ, ಗುತ್ತಿಗೆದಾರ ಆರ್. ರಾಮರೆಡ್ಡಿ,ರಾಘವೇಂದ್ರ ಇಂಜಿನಿಯರ್ ಪ್ರೀತಿ ಸೇರಿದಂತೆ ತಾಲ್ಲೂಕು ಮಟ್ಟದ ಇತರೆ ಇಲಾಖೆ ಅಧಿಕಾರಿಗಳು ಹಾಗೂ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.
