Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Saturday, January 24
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನದ ಮರ್ಯಾದೆಗೇಡು ಹತ್ಯೆ ನಡೆಯುತ್ತಿದೆ: ಕೆ.ವಿ.ಪ್ರಭಾಕರ್
Uncategorized

ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನದ ಮರ್ಯಾದೆಗೇಡು ಹತ್ಯೆ ನಡೆಯುತ್ತಿದೆ: ಕೆ.ವಿ.ಪ್ರಭಾಕರ್

KumarBy KumarAugust 30, 2025No Comments3 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನದ ಮರ್ಯಾದೆಗೇಡು ಹತ್ಯೆ ನಡೆಯುತ್ತಿದೆ: ಕೆ.ವಿ.ಪ್ರಭಾಕರ್

ವಿಗ್ರಹಗಳನ್ನು ಸ್ಥಾಪಿಸಿ ವಿಚಾರಗಳನ್ನು ಕೊಲ್ಲುವ ಅಪಾಯದ ಬಗ್ಗೆ ಎಚ್ಚರ: ಕೆ.ವಿ.ಪಿ

ಮನುಸ್ಮೃತಿಯ ಘರ್ ವಾಪ್ಸಿಯನ್ನು ಸಂವಿಧಾನ ತಡೆದು ನಿಲ್ಲಿಸಿದೆ: ಕೆ.ವಿ.ಪಿ

ಚಿತ್ರದುರ್ಗ ಹೊಯ್ಸಳ ನ್ಯೂಸ್/

ಚಿತ್ರದುರ್ಗ ಆ 30:

ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮೃತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು ಇದು ಸಾಧ್ಯವಾಗದಂತೆ ತಡೆದು ನಿಲ್ಲಿಸಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ. ಈ ಕಾರಣಕ್ಕೇ ಸಂವಿಧಾನದ ಕುತ್ತಿಗಿಗೇ ಕೈ ಹಾಕಲಾಗುತ್ತಿದೆ. ಇದಕ್ಕೆ ಸುದ್ದಿ ಮಾಧ್ಯಮ ಮೂಕಸಾಕ್ಷಿಯಾಗಿರುವುದು ಅಪಾಯಕಾರಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಪ್ರಚಾರ ಇಲಾಖೆ, SC/ST ಸಂಪಾದಕರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ವಿಚಾರಗೋಷ್ಠಿಯನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಹೊತ್ತಿನ ಬಹಳ ಪತ್ರಕರ್ತರ ಕೈಯಲ್ಲಿ ವಿಚಾರ, ವಿಮರ್ಷೆಗಿಂತ ಹೆಚ್ಚಾಗಿ ಪೆಟ್ರೋಲ್, ಬೆಂಕಿಪೊಟ್ಟಣವೇ ಹೆಚ್ಚಾಗಿದೆ. ಕಡ್ಡಿಗೀರುವ ಅವಕಾಶಕ್ಕಾಗಿ ಕಾಯುತ್ತಿರುವಂತೆ ಕಾಣುತ್ತಾರೆ. ಪ್ರಜಾಪ್ರಭುತ್ವದ ಪ್ರಾಣ ಪಕ್ಷಿ ಸುದ್ದಿ ಸಂಸ್ಥೆಗಳ ಕೈಯಲ್ಲಿದೆ. ಪ್ರಾಣ ಉಳಿಸುವುದು, ಬಿಡುವುದು ಇವರಿಗೇ ಬಿಟ್ಟಿದೆ ಎಂದು ವಿವರಿಸಿದರು.‌

ಸುದ್ದಿ ಮಾಧ್ಯಮದ ಆತ್ಮ ಆಗಿರುವ “ವಾಕ್ ಸ್ವಾತಂತ್ರ್ಯ ಮತ್ತು ಜಾತ್ಯತೀತತೆ ಹಾಗೂ ಸಾಮಾಜಿಕ ನ್ಯಾಯ”ವೇ ಅಂಬೇಡ್ಕರ್ ದೃಷ್ಟಿಕೋನದ ಆತ್ಮವೂ ಆಗಿದೆ. ಅಂಬೇಡ್ಕರ್ ಕೊಟ್ಟ ಸಂವಿಧಾನದ ಮೌಲ್ಯವೂ ಆಗಿದೆ ಎಂದು ಅಭಿಪ್ರಾಯಪಟ್ಟರು.

ಇವತ್ತಿನ‌ ಸುದ್ದಿ ಮಾಧ್ಯಮಗಳ ರಚನೆ ಮತ್ತು ಆಚರಣೆಯಲ್ಲಿ ಜಾತ್ಯತೀತತೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ, ಅಂಬೇಡ್ಕರ್ ದೃಷ್ಟಿಕೋನದ ಮರ್ಯಾದೆಗೇಡು ಹತ್ಯೆ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ದೇಶದಲ್ಲಿ ಎರಡು ತದ್ವಿರುದ್ದವಾದ ಬೆಳವಣಿಗೆಗಳು ಅತೀ ವೇಗವಾಗಿ ನಡೆಯುತ್ತಿವೆ. ಒಂದು ಅಂಬೇಡ್ಕರ್ ಅವರ ವಿಗ್ರಹಗಳನ್ನು ಅತೀ ಹೆಚ್ಚು ನಿರ್ಮಿಸುತ್ತಲೇ ಅಂಬೇಡ್ಕರ್ ಅವರ ವಿಚಾರಗಳನ್ನು ಕೊಲ್ಲುವ ಪ್ರಕ್ರಿಯೆ ಕೂಡ ಹೆಚ್ಚು ವೇಗ ಪಡೆದುಕೊಂಡಿದೆ. ವಿಗ್ರಹಗಳನ್ನು ಸ್ಥಾಪಿಸಿ, ವಿಚಾರಗಳನ್ನು ಕೊಲ್ಲುವ ಈ ವಿದ್ಯಮಾನಕ್ಕೆ ಸುದ್ದಿ ಮಾಧ್ಯಮ ” ಮೂಕಸಾಕ್ಷಿ”ಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇಡೀ ದೇಶದಲ್ಲಿ ಅತೀ ಹೆಚ್ಚು ಅಂಬೇಡ್ಕರ್ ವಿಗ್ರಹಗಳನ್ನು ಸ್ಥಾಪಿಸಲಾಗಿದೆ. ಆದರೆ, ವಿಶ್ವದಲ್ಲೇ ಅತೀ ಹೆಚ್ಚು ಮಾನ್ಯತೆ ಪಡೆದ ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೂಪಗೊಳಿಸುತ್ತಾ, ಸಂವಿಧಾನದ ತಲೆ ಕತ್ತರಿಸುವುದು, ಕೈ ಮುರಿಯುವುದು, ಮಸಿ ಬಳಿಯುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಸಂವಿಧಾನದಿಂದ “ಜಾತ್ಯತೀತ ಮತ್ತು ಸಮಾಜವಾದ” ಎನ್ನುವ ಮೌಲ್ಯವನ್ನು ಕೀಳಬೇಕು ಎನ್ನುವ ಕೂಗಿನ‌ ಹಿಂದೆ ಇರುವುದೂ ಕೂಡ ಅಂಬೇಡ್ಕರ್ ಪ್ರತಿಮೆಯನ್ನು ವಿರೂಪಗೊಳಿಸುವ ವಿಕೃತ ಮನಸ್ಥಿತಿಯೇ ಆಗಿದೆ ಎಂದು ವಿಶ್ಲೇಷಿಸಿದರು.

ತಮ್ಮ 65 ವರ್ಷಗಳ ಜೀವಿತಾವಧಿಯಲ್ಲಿ ಅರ್ಧಕ್ಕೂ ಹೆಚ್ಚು ಆಯಸ್ಸನ್ನು ಅಂಬೇಡ್ಕರ್ ಅವರು ಪತ್ರಕರ್ತರಾಗಿ, ಸಂಪಾದಕರಾಗಿ, ಲೇಖಕರಾಗಿ, ಬರಹಗಾರರಾಗಿ ಕಳೆದಿದ್ದಾರೆ.

*1920 ರಲ್ಲಿ “ಮೂಕನಾಯಕ”
*1927 ರಲ್ಲಿ “ಬಹಿಷ್ಕೃತ ಭಾರತ”
*1928 ರಲ್ಲಿ “ಸಮತಾ”
*1930 ರಲ್ಲಿ “ಜನತಾ”
*1943 ರಲ್ಲಿ ಪ್ರಬುದ್ಧ ಭಾರತ ಪತ್ರಿಕೆಗಳನ್ನು ಆರಂಭಿಸಿ ಮುನ್ನಡೆಸಿದರು.

ಸದ್ಯ ಸುಮಾರು 25000 ಪುಟದಷ್ಟು ಅಂಬೇಡ್ಕರ್ ಅವರ ಬರಹಗಳು ಲಭ್ಯವಿದೆ. ಸುಮಾರು ಐದು ವರ್ಷಗಳ ಕಾಲ ಜಗತ್ತಿನ ಎಲ್ಲಾ ಧಾರ್ಮಿಕ ಗ್ರಂಥಗಳನ್ನೂ ಅಭ್ಯಾಸ ಮಾಡಿ, ಅಧ್ಯಯನ‌ ನಡೆಸಿ “ಬುದ್ಧ ಮತ್ತು ಅವನ ಧರ್ಮ” ಕೃತಿಯನ್ನು ಬರೆಯುವಾಗಲೇ ತಾವು ಮಾಡಿಟ್ಟಿದ್ದ ನೋಟ್ಸ್ ಗಳ ರಾಶಿಯ ಮೇಲೇ ಕೊನೆಯುಸಿರೆಳೆದರು.

ತಮ್ಮ ಇಡೀ ಜೀವಮಾನವನ್ನು ಪ್ರಬುಧ್ಧ ಭಾರತದ ನಿರ್ಮಾಣಕ್ಕಾಗಿ ನಿರಂತರವಾಗಿ ನಿಷ್ಠುರ ಸಂಪಾದಕೀಯಗಳನ್ನು, ಲೇಖನಗಳನ್ನು ಬರೆದರು. ಆ ನಿಷ್ಠುರತೆ ಇವತ್ತಿನ ಸುದ್ದಿ ಮಾಧ್ಯಮಗಳಲ್ಲಿ ಅಳಿಸುತ್ತಿದೆ.

ಒಂದು ಕಡೆ ಮಾಧ್ಯಮಗಳಲ್ಲಿ ದಲಿತ ಸಮುದಾಯದ ಪ್ರತಿನಿಧ್ಯವೇ ಇಲ್ಲ ಎನ್ನುವ ಅಧ್ಯಯನ‌ ವರದಿಗಳು ಬಂದಿವೆ. ನಿರ್ಣಾಯಕ ಸ್ಥಾನಗಳಲ್ಲಿ ಮಹಿಳೆಯರಿಗೆ, ದಲಿತರಿಗೆ ಸುದ್ದಿ ಸಂಸ್ಥೆಗಳು ನಿಷೇದ ಹೇರಿವೆ ಎನ್ನುವ ವರದಿಗಳೂ ಇವೆ. ಈ ತಾರತಮ್ಯ ಸುದ್ದಿಗಳ, ಸಂಗತಿಗಳ ಆಯ್ಕೆಯ ಮೇಲೆ ಪರಿಣಾಮ ಬೀರುತ್ತವೆ. ಮಾತ್ರವಲ್ಲದೆ ಪತ್ರಿಕೆಗಳನ್ನು ರೂಪಿಸುವ ಮತ್ತು ಸುದ್ದಿಗಳನ್ನು ಗ್ರಹಿಸುವುದರಲ್ಲಿ ಮತ್ತು ಮಂಡಿಸುವುದರಲ್ಲೂ ಅಂಬೇಡ್ಕರ್ ದೃಷ್ಟಿಕೋನ ಕಾಣೆಯಾಗಿದೆ ಎಂದರು.

ಆದ್ದರಿಂದ ಅಂಬೇಡ್ಕರ್ ಅವರ ದೃಷ್ಟಿಕೋನದ ಮರುಸ್ಥಾಪನೆ ಮತ್ತು ಸುದ್ದಿ ಮಾಧ್ಯಮಗಳಲ್ಲಿ ನಾಪತ್ತೆಯಾಗಿರುವ ಕಾಳಜಿಗಳ ಮರು ಶೋಧನೆ ಆಗುವ ಅಗತ್ಯವಿದೆ.

2012 ರ ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿಯನ್ನು ನೆಪವಾಗಿ ಇಟ್ಟುಕೊಂಡು ಪ್ರಜಾವಾಣಿ ಪತ್ರಿಕೆ ದೇವನೂರು ಮಹದೇವ ಅವರ ಅತಿಥಿ ಸಂಪಾದಕತ್ವದಲ್ಲಿ ಸಂಚಿಕೆ ಹೊರತಂದಿತ್ತು. ಈ ಸಂಚಿಕೆಯನ್ನು ನಾನು ಇವತ್ತಿಗೂ ಜೋಪಾನವಾಗಿ ಇಟ್ಟಿದ್ದೀನಿ. ಈ ಸಂಚಿಕೆ ಪತ್ರಿಕೋದ್ಯಮದಲ್ಲಿ ಮರ್ಯಾದೆಗೇಡು ಹತ್ಯೆಗೆ ಒಳಗಾಗಿರುವ ಅಂಬೇಡ್ಕರ್ ದೃಷ್ಟಿಕೋನಕ್ಕೆ ಮರು ಜೀವ ಕೊಡುವ ಅದ್ಭುತ ಪ್ರಯತ್ನವಾಗಿತ್ತು.

ಆ ಸಂಚಿಕೆಯ ಮುಖಪುಟದಲ್ಲಿ, ದೇವನೂರು ಮಹದೇವ ಅವರು ಬರೆದಿರುವ “ಸಮಾನತೆ ಕನಸನ್ನು ಮತ್ತೆ ಕಾಣುತ್ತಾ” ಎನ್ನುವ ಅತಿಥಿ ಸಂಪಾದಕೀಯ ಮತ್ತು ಇದರ ಪಕ್ಕದಲ್ಲೇ ಸಂಪಾದಕ ಶಾಂತಕುಮಾರ್ ಅವರು ಬರೆದಿರುವ “ಕಾಳಜಿಗಳ ಮರು ಶೋಧ..” ಎನ್ನುವ ಸಂಪಾದಕೀಯ ಎರಡೂ ಕನ್ನಡಿಗಳು.

ಈ ಸಂಪಾದಕೀಯದ ಕನ್ನಡಿಗಳಲ್ಲಿ ನಾವು ಪತ್ರಕರ್ತರು ನಮ್ಮನ್ನು ನಾವು ಮರು ಶೋಧಿಸಿಕೊಳ್ಳುವ ಅಗತ್ಯವಿದೆ. ಈ ಕನ್ನಡಿಗಳಲ್ಲಿ ಈ ಹೊತ್ತಿನ ಸುದ್ದಿ ಮಾಧ್ಯಮಗಳು ದರ್ಶನ ಪಡೆಯಲಿ ಎಂದು ಆಶಿಸಿದರು.

ವಿಧಾನ ಪರಿಷತ್ ಸದಸ್ಯರಾದ ನವೀನ್ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಡಿ.ಉಮಾಪತಿ‌ ಅವರು ಆಶಯ ಮಾತುಗಳನ್ನಾಡಿದರು. ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೆಷಾ ಖಾನುಂ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿಯ ಕಾರ್ಯದರ್ಶಿ ಸಹನಾ ಭಟ್, ಅಕಾಡೆಮಿ ಸದಸ್ಯರಾದ ಅಹೋಬಳಪತಿ ಸೇರಿ SC/ST ಸಂಪಾದಕರ ಸಂಘದ ಪದಾಧಿಕಾರಿಗಳು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email
Previous Articleಮಾದಿಗ ಸಮುದಾಯ ಭವನ ನಿರ್ಮಾಣಕ್ಕೆ ₹1ಕೋಟಿ ರೂ ಅನುದಾನ ನೀಡುವುದಾಗಿ ಭರವಸೆ – ಶಾಸಕ ಬಿ.ಜಿ. ಗೋವಿಂದಪ್ಪ
Next Article ಪ್ರಜಾಪ್ರಗತಿ ನಾಗಣ್ಣ ಅವರಿಗೆ ಅಭಿನಂದನಾ ಕಾರ್ಯಕ್ರಮ
Kumar
  • Website

Related Posts

No Account Casino Sites: The Future of Online Betting

January 23, 2026

The Ultimate Overview to Recruitment Software

January 23, 2026

Exploring the Advantages of Online Psychology Therapy

January 23, 2026
Leave A Reply Cancel Reply

Search
Tags
Amazing gadgets Apartment guides Beauty essentials Biggest fashion angel Brave Business Business insurances Business schools Celebrity photos Cheapest flights Civil societies culture Culture tips Electronic gadgets Fashion Fashion shows Feature featured fitness Flight scanners Food Good stock quotes Interview questions leisure Lifestyle Link Luxury homes Makeup artists Music Open source software Pretty dresses Preventative medicines Sports Staff Pick Stockcharts Studio apartments Tech Tech reviews Topic Trending Trip activities Unbelievable home decor Vaccination schedules Weight loss meal plans Weight loss supplements

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

No Account Casino Sites: The Future of Online Betting

The Ultimate Overview to Recruitment Software

Exploring the Advantages of Online Psychology Therapy

Online Psychologist Diagnosis: A Comprehensive Guide

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

No Account Casino Sites: The Future of Online Betting

January 23, 2026

The Ultimate Overview to Recruitment Software

January 23, 2026

Exploring the Advantages of Online Psychology Therapy

January 23, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.