Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Saturday, January 17
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ಗಣತಿ ಸರ್ವ ಜಾತಿ ಪ್ರಗತಿಗೆ ಬುನಾದಿ ನಿರ್ಲಕ್ಷ್ಯಿಸಿದರೇ ಸಮುದಾಯಕ್ಕೆ ಅನ್ಯಾಯ ಮಾಜಿ ಸಚಿವ ಹೆಚ್.ಆಂಜನೇಯ
Uncategorized

ಗಣತಿ ಸರ್ವ ಜಾತಿ ಪ್ರಗತಿಗೆ ಬುನಾದಿ ನಿರ್ಲಕ್ಷ್ಯಿಸಿದರೇ ಸಮುದಾಯಕ್ಕೆ ಅನ್ಯಾಯ ಮಾಜಿ ಸಚಿವ ಹೆಚ್.ಆಂಜನೇಯ

KumarBy KumarOctober 6, 2025Updated:October 6, 2025No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

ಗಣತಿ ಸರ್ವ ಜಾತಿ ಪ್ರಗತಿಗೆ ಬುನಾದಿ

ನಿರ್ಲಕ್ಷ್ಯಿಸಿದರೇ ಸಮುದಾಯಕ್ಕೆ ಅನ್ಯಾಯ

ಮಾಜಿ ಸಚಿವ ಹೆಚ್.ಆಂಜನೇಯ ಹೇಳಿಕೆ

ಬಿ.ದುರ್ಗದಲ್ಲಿ ಜಾಗೃತಿ ಸಭೆ

ಚಿತ್ರದುರ್ಗ ಹೊಯ್ಸಳ ನ್ಯೂಸ್ /   

ಹೊಳಲ್ಕೆರೆ:ಅ.೫

ರಾಜ್ಯದಲ್ಲಿ ಆರಂಭವಾಗಿರುವ ಸಾಮಾಜಿಕ, ಶೈಕ್ಷಣ ಕ, ಆರ್ಥಿಕ ಸಮೀಕ್ಷೆ ನಾಡಿನ ಪ್ರಗತಿಗೆ ಬುನಾದಿ ಆಗಲಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದರು.

ತಾಲೂಕಿನ ಬಿ.ದುರ್ಗದಲ್ಲಿ ಗಣತಿದಾರರೊಂದಿಗೆ ಮನೆ ಮನೆಗೆ ಭೇಟಿ ನೀಡಿದ ಬಳಿಕ ಆಯೋಜಿಸಿದ್ದ ಜಾಗೃತಿ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಯಾವ ಸಮುದಾಯ ಎಷ್ಟು ಸಂಖ್ಯೆಯಲ್ಲಿದೆ, ಅವರು ಯಾವ ಮಟ್ಟದಲ್ಲಿ ಹಿಂದುಳಿದಿದ್ದಾರೆAಬ ಮಾಹಿತಿ ಸಂಗ್ರಹಿಸಿ, ಅವರ ಸಮಗ್ರ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಿ, ಅನುಷ್ಠಾನಗೊಳಿಸಲು ಸರ್ಕಾರಕ್ಕೆ ಸಮೀಕ್ಷೆ ಕಾರ್ಯ ಸಹಕಾರಿ ಆಗಲಿದೆ ಎಂದರು.

ಸಮೀಕ್ಷೆ ಕುರಿತು ಅಪಸ್ವರ, ಅಸಡ್ಡೆ ಮಾತುಗಳು ನೊಂದ ಜನರ ಬದುಕಿಗೆ ಕಂಟಕವಾಗಲಿದೆ. ಆದ್ದರಿಂದ ಈ ವಿಷಯದಲ್ಲಿ ಪಕ್ಷಾತೀತವಾಗಿ ಒಗ್ಗೂಡಿ, ಬದ್ಧತೆಯಿಂದ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕಿದೆ. ಎಲ್ಲ ಪಕ್ಷಗಳ ಕಾರ್ಯಕರ್ತರು ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ಲಿಂಗಾಯಿತ, ಕುಂಚಿಟಿಗ, ಗೊಲ್ಲರು, ಮಾದಿಗರು, ಕುರುಬರು, ಬ್ರಾಹ್ಮಣರು ಸೇರಿ ಎಲ್ಲ ಜಾತಿಗಳಲ್ಲೂ ಬಡವರಿದ್ದಾರೆ. ಈ ವರ್ಗದ ಜನರನ್ನು ಮುಖ್ಯವಾಹಿನಿಗೆ ತರಲು ಸಮೀಕ್ಷೆ ಬುನಾದಿ ಆಗಲಿದೆ ಎಂಬ ಸತ್ಯ ಅರಿತುಕೊಳ್ಳಬೇಕು ಎಂದರು.

ಕುಟುAಬವೊAದರಲ್ಲಿ ಎಷ್ಟು ಜನರಿದ್ದಾರೆ, ಅವರ ಆರ್ಥಿಕ, ಶೈಕ್ಷಣ ಕ ಪರಿಸ್ಥಿತಿ ಏನು ಹೀಗೆ ಅನೇಕ ವಿಷಯಗಳನ್ನು ಅರಿತರೇ ಮಾತ್ರ ಸಮುದಾಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಮುಂದಾಗಲು ಸಾಧ್ಯ. ಇಲ್ಲದಿದ್ದರೇ ಮೀಸಲಾತಿ, ಸರ್ಕಾರಿ ಸೌಲಭ್ಯಗಳು ಬಡ ಜನರಿಗೆ ತಲುಪಲು ಕಷ್ಟವಾಗಲಿದೆ ಎಂದು ತಿಳಿಸಿದರು.

ಸರ್ಕಾರಿ ಯೋಜನೆಗಳನ್ನು ಯಾವ ಆಧಾರದ ಮೇಲೆ ರೂಪಿಸುತ್ತೀರಿ, ಯಾವ ಸಮುದಾಯದ ಸಂಖ್ಯೆ ಎಷ್ಟು, ಅವರ ಹಿಂದುಳಿಯುವಿಕೆಗೆ ನಿಮ್ಮಲ್ಲಿ ಯಾವ ಅಂಕಿ ಅಂಶ ಇದೆ ಎಂದು ಅನೇಕ ಪ್ರಸಂಗಗಳಲ್ಲಿ ನ್ಯಾಯಾಲಯ ಕೂಡ ಸರ್ಕಾರಗಳನ್ನು ಪ್ರಶ್ನೇ ಮಾಡಿದೆ. ಇಂತಹ ಎಲ್ಲ ಪ್ರಶ್ನೇಗಳಿಗೂ ಸಮೀಕ್ಷೆ ಕಾರ್ಯ ಉತ್ತರದ ಜೊತೆಗೆ ರಾಜ್ಯದ ಸರ್ವ ಸಮುದಾಯಗಳ ಪ್ರಗತಿಗೆ ಆಧಾರವಾಗಲಿದೆ ಎಂದರು.

ಈ ವಿಷಯದಲ್ಲಿ ಯಾವುದೇ ಪಕ್ಷದ ಮುಖಂಡರು ರಾಜಕಾರಣ ಮಾಡುವುದು ತಮ್ಮದೇ ಸಮುದಾಯಕ್ಕೆ ಅನ್ಯಾಯ ಮಾಡಿದಂತೆ. ಆದ್ದರಿಂದ ರಾಜಕೀಯಕ್ಕಾಗಿ ವಿರೋಧ ಮಾಡದೆ ತಮ್ಮ ಜಾತಿಗಳಲ್ಲಿ ಸಮೀಕ್ಷೆಯಲ್ಲಿ ಸಮರ್ಥವಾಗಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಿದರೆ ಬಡ, ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದಲ್ಲಿ ಜಾತಿಗಣತಿ ಕಾರ್ಯ ಕೈಗೊಂಡ ಹೆಗ್ಗಳಿಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ. ಕಾಂತರಾಜ್ ಆಯೋಗದ ವರದಿ ಬಿಡುಗಡೆ ವಿಳಂಬ ಆಗಿದ್ದರಿಂದ, ಮರು ಸಮೀಕ್ಷೆ ನಡೆಸಲಾಗುತ್ತಿದೆ. ಆದರೆ, ಸಮೀಕ್ಷೆ ವೇಳೆ ೬೦ ಪ್ರಶ್ನೇಗಳಲ್ಲಿ ಕೆಲವುಗಳಿಗೆ ಕಡಿವಾಣ ಹಾಕಬಹುದಿತ್ತು. ಅದರಲ್ಲೂ ಮತದಾರರ ಚೀಟಿ, ಜನನ ಪ್ರಮಾಣ ಪತ್ರ ಕೇಳುವುದು ಅನಗತ್ಯ. ಪರಿಣಾಮ ಜನಸಂಖ್ಯೆ ಕಡಿಮೆ ದಾಖಲಾಗುವ ಆತಂಕ ಇದೆ. ಆದ್ದರಿಂದ ಆಯೋಗ ಇದನ್ನು ಗಮನಿಸಿ, ಸರಿಪಡಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಟಿ.ಹನುಮಂತಪ್ಪ, ಜಿಪಂ ಮಾಜಿ ಅಧ್ಯಕ್ಷ ಪಿ.ಆರ್.ಶಿವಕುಮಾರ್, ಮಾಜಿ ಸದಸ್ಯ ರಂಗಸ್ವಾಮಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮುತ್ತುಗದೂರು ರುದ್ರಪ್ಪ, ಯುವ ಘಟಕದ ಅಧ್ಯಕ್ಷ ಚೇತನಕುಮಾರ್ ಬೋರೇನಹಳ್ಳಿ, ಮುಖಂಡರಾದ ಗಿರಿಜಮ್ಮ ಬಸವರಾಜ್, ಸಾಸಲು ದೇವಣ್ಣ, ಕೆ.ಸಿ.ಪುರುಷೋತ್ತಮ್, ಹನುಮಂತಪ್ಪ ಗೋಡೆಮನೆ, ಪ್ರಕಾಶ್, ಬಸವರಾಜ್, ಸಂಗನಗುಂಡಿ ಮಂಜಣ್ಣ ಇತರರಿದ್ದರು.

Share. Facebook Twitter Pinterest LinkedIn Tumblr Email
Previous Articleಕೆಯುಡಬ್ಲೂಜೆ ಗ್ರಂಥಾಲಯ ಉದ್ಘಾಟನೆ ನಿರಂತರ ಪುಸ್ತಕಗಳ ಓದಿನ ಅಭಿರುಚಿಯಿಂದ ಜ್ಞಾನ ಸಂಪಾದನೆ ಸಾಧ್ಯ: ಜಿಲ್ಲಾಧಿಕಾರಿ ಜಗದೀಶ್
Next Article ಭೂಮಿಕಾ ಎಲೆಕ್ಟ್ರಿಕಲ್ಸ್ ನ ಮಾಲಿಕರು, ವಿದ್ಯುತ್ ಗುತ್ತಿಗೆದಾರರಾದ ಮಹಂತೇಶ್ ಇವರ ತಾಯಿ ಶ್ರೀಮತಿ ಚೌಡಮ್ಮ ನಿಧನ
Kumar
  • Website

Related Posts

ಚಕ್ರಗಳೇ ಇಲ್ಲದ ಬಸ್‌ಗೆ ಫಿಟ್‌ನೆಸ್! ಸಾರಿಗೆ ಇಲಾಖೆಯೊಳಗಿನ ಸಂಧಿ ಬಯಲು ಮಾಡಿದ ದಾಖಲೆ

January 17, 2026

Roulette Bonus Live: Das ultimative Spielerlebnis für Roulette-Fans

January 17, 2026

Casino Games Reliable: A Comprehensive Review

January 16, 2026
Leave A Reply Cancel Reply

Search
Tags
Amazing gadgets Apartment guides Beauty essentials Biggest fashion angel Brave Business Business insurances Business schools Celebrity photos Cheapest flights Civil societies culture Culture tips Electronic gadgets Fashion Fashion shows Feature featured fitness Flight scanners Food Good stock quotes Interview questions leisure Lifestyle Link Luxury homes Makeup artists Music Open source software Pretty dresses Preventative medicines Sports Staff Pick Stockcharts Studio apartments Tech Tech reviews Topic Trending Trip activities Unbelievable home decor Vaccination schedules Weight loss meal plans Weight loss supplements

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

ಚಕ್ರಗಳೇ ಇಲ್ಲದ ಬಸ್‌ಗೆ ಫಿಟ್‌ನೆಸ್! ಸಾರಿಗೆ ಇಲಾಖೆಯೊಳಗಿನ ಸಂಧಿ ಬಯಲು ಮಾಡಿದ ದಾಖಲೆ

Roulette Bonus Live: Das ultimative Spielerlebnis für Roulette-Fans

The Rise of Online Casinos: Trends and Insights

The Impact of Artificial Intelligence on Casino Operations

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

ಚಕ್ರಗಳೇ ಇಲ್ಲದ ಬಸ್‌ಗೆ ಫಿಟ್‌ನೆಸ್! ಸಾರಿಗೆ ಇಲಾಖೆಯೊಳಗಿನ ಸಂಧಿ ಬಯಲು ಮಾಡಿದ ದಾಖಲೆ

January 17, 2026

Roulette Bonus Live: Das ultimative Spielerlebnis für Roulette-Fans

January 17, 2026

The Rise of Online Casinos: Trends and Insights

January 16, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.