April 30, 2024

Chitradurga hoysala

Kannada news portal

ನಾಳೆ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ರಸ್ತೆ ಸಂಚಾರ ಮಾರ್ಗ ಬದಲಾವಣೆ:ಡಿಸಿ

1 min read

ಚಿತ್ರದುರ್ಗ,ಸೆಪ್ಟೆಂಬರ್.11:
ಚಿತ್ರದುರ್ಗ ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಗರಂಗದಳದ ವತಿಯಿಂದ ಪ್ರತಿಷ್ಟಾಪಿಸಲ್ಪಟ್ಟಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯು ಸೆಪ್ಟೆಂಬರ್ 12ರಂದು ಇರುವುದರಿಂದ, ನಗರದಲ್ಲಿನ ರಸ್ತೆ ಸಂಚಾರದ ಮಾರ್ಗವನ್ನು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಆದೇಶಿಸಿದ್ದಾರೆ.
 ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆಯು ನಗರದಲ್ಲಿ ಹಾದು ಹೋಗಿರುವ ಮುಖ್ಯ ರಸ್ತೆಯಾದ ಬಿ.ಡಿ.ರಸ್ತೆಯಲ್ಲಿ ಸಾಗಿ ಹೊಳಲ್ಕೆರೆ ರಸ್ತೆ ಮುಖಾಂತರ ಹೋಗಲಿದ್ದು, ವಿಸರ್ಜನಾ ಮೆರವಣೆಗೆಯಲ್ಲಿ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಮೆರವಣಿಗೆ ಸಮಯದಲ್ಲಿ ಚಿತ್ರದುರ್ಗ ನಗರದಲ್ಲಿನ ರಸ್ತೆಗಳಲ್ಲಿ ಸಂಚರಿಸುತ್ತಿರುವ ವಾಹನಗಳು ನಗರದ ಮುಖ್ಯರಸ್ತೆ ಹಾಗೂ ಇತರೆ ರಸ್ತೆಗಳಲ್ಲಿ ಸಂಚರಿಸಲು ಸಾಧ್ಯವಾಗದ ಕಾರಣ ಸೆಪ್ಟೆಂಬರ್ 12ರಂದು ಚಿತ್ರದುರ್ಗ ನಗರದಲ್ಲಿ ಸಂಚರಿಸುವ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶ ಹೊರಡಿಸಲಾಗಿದೆ.
  ಸಾರ್ವಜನಿಕ ಸಂಚಾರ ಕ್ರಮಗೊಳಿಸುವ ದೃಷ್ಠಿಯಿಂದ ಚಿತ್ರದುರ್ಗ ನಗರದ ಮುಖ್ಯ ರಸ್ತೆ ಮತ್ತು ಇತರೆ ರಸ್ತೆಗಳಲ್ಲಿ ಸಂಚರಿಸಲಿರುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಆದೇಶಿಸಲಾಗಿದೆ.
ಬದಲಿ ಮಾರ್ಗಗಳು: ಬೆಂಗಳೂರು ಮತ್ತು ಚಳ್ಳಕೆರೆ ಮಾರ್ಗವಾಗಿ ಬರುವ ವಾಹನಗಳು ಎನ್.ಹೆಚ್-4 ಬೈಪಾಸ್ ರಸ್ತೆ ಮುಖಾಂತರ ಬಂದು ಮೆದೆಹಳ್ಳಿ ರಸ್ತೆ ಮತ್ತು ಎಪಿಎಂಸಿ ಮಾರ್ಕೆಟ್ ಮುಖಾಂತರ ಬಸ್ ನಿಲ್ದಾಣಗಳಿಗೆ ಬಂದು ಪುನಃ ವಾಪಾಸು ಅದೇ ಮಾರ್ಗದಲ್ಲಿ ಸಂಚರಿಸುವುದು. ದಾವಣಗೆರೆ ಮಾರ್ಗದಿಂದ ಬರುವ ವಾಹನಗಳು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಬಂದು ಪುನಃ ಅದೇ ಮಾರ್ಗದಲ್ಲಿ ಸಂಚರಿಸುವುದು.           ಶಿವಮೊಗ್ಗ, ಹೊಳಲ್ಕೆರೆ, ಭೀಮಸಮುದ್ರದ ಮಾರ್ಗದಿಂದ ಬರುವ ವಾಹನಗಳು ಎನ್.ಹೆಚ್-13 ಬೈಪಾಸ್‍ನಲ್ಲಿ ಮುರುಘಾಮಠದವರೆಗೆ ಹೋಗಿ ನಂತರ ಎನ್.ಹೆಚ್-4 ಬೈಪಾಸ್ ರಸ್ತೆ ಮುಖಾಂತರ ಕೆಎಸ್‍ಆರ್‍ಟಿಸಿ ಮತ್ತು ಖಾಸಗಿ ನಿಲ್ದಾಣಕ್ಕೆ ಬಂದು ಪುನಃ ವಾಪಸು ಅದೇ ಮಾರ್ಗದಲ್ಲಿ ಸಂಚರಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.

About The Author

Leave a Reply

Your email address will not be published. Required fields are marked *