Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Monday, July 6
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ಭದ್ರಾ ಮೇಲ್ದಂಡೆಗೂ ಎಸ್ಪಿಪಿ- ಟಿಎಸ್ಪಿ ಬಳಕೆ ಮಾಡುವಂತೆ ಸಾರ್ವಜನಿಕ ಹಿತಾಸಕ್ತಿ ರಿಟ್ : ಬಿ.ಎ.ಲಿಂಗಾರೆಡ್ಡಿ
Uncategorized

ಭದ್ರಾ ಮೇಲ್ದಂಡೆಗೂ ಎಸ್ಪಿಪಿ- ಟಿಎಸ್ಪಿ ಬಳಕೆ ಮಾಡುವಂತೆ ಸಾರ್ವಜನಿಕ ಹಿತಾಸಕ್ತಿ ರಿಟ್ : ಬಿ.ಎ.ಲಿಂಗಾರೆಡ್ಡಿ

KumarBy KumarSeptember 4, 2025Updated:September 4, 2025No Comments3 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

ತುಂಗ ಭದ್ರಾ ಹಿನ್ನೀರು ಯೋಜನೆಗೆ ಎಸ್ಪಿಪಿ-ಟಿಎಸ್ಪಿ ಅನುದಾನ ಬಳಕೆ

ಭದ್ರಾ ಮೇಲ್ದಂಡೆಗೂ ಎಸ್ಪಿಪಿ- ಟಿಎಸ್ಪಿ ಬಳಕೆ ಮಾಡುವಂತೆ ಸಾರ್ವಜನಿಕ ಹಿತಾಸಕ್ತಿ ರಿಟ್ : ಬಿ.ಎ.ಲಿಂಗಾರೆಡ್ಡಿ

ಚಿತ್ರದುರ್ಗ ಹೊಯ್ಸಳ ನ್ಯೂಸ್/
ಚಿತ್ರದುರ್ಗ:

ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರಾ ಮೇಲ್ದಂಡೆ ಕಾಮಗಾರಿಗೆ ಎಸ್ಸಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿಕೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ನೀರಾ್ವರಿ ಅನುಷ್ಠಾನ ಹೋರಾಟ ಸಮಿತಿ ರಾಜ್ಯ ಸರ್ಕಾರವ ಆಗ್ರಹಿಸಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಉದಾಸೀನ ಮನೋಭಾವ ಹಾಗೂ ಅನುದಾನದ ಕೊರತೆಯಿಂದಾಗಿ ಕಾಮಗಾರಿ ಹೆಚ್ಚು ಕಡಿಮೆ ಸ್ಥಗಿತಗೊಂಡಿದೆ. 5300 ಕೋಟಿ ರು ಅನುದಾನ ನೀಡಲಿ ಎಂದು ರಾಜ್ಯ ಸರ್ಕಾರ ಕೇಂದ್ರದತ್ತ ಬೊಟ್ಟು ಮಾಡಿ್ದ್ದರೆ, ಕೇಂದ್ರ ಸರ್ಕಾರ ಅನುದಾನ ಬಿಡುಗಡೆಗಾಗಿ ತಾಂತ್ರಿಕ ಮಾಹಿತಿಗಳ ಪೂರೈಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರಗಳ ಮೇಲೆ ಪತ್ರ ಬರೆಯುತ್ತಿದೆ. ಎರಡೂ ಸರ್ಕಾರದ ನಡೆಗಳಿಂದಾಗಿ ಭದ್ರಾ ಮೇಲ್ದಂಡೆ ಸೊರಗಿದೆ.
ಹಾಲಿ ಶರವೇಗದಲ್ಲಿ ನಡೆಯುತ್ತಿರುವ ತುಂಗ ಭದ್ರಾ ಹಿನ್ನೀರು ಕುಡಿವ ನೀರಿನ ಎರಡುವರೆ ಸಾವಿರ ಕೋಟಿ ರುಪಾಯಿ ವೆಚ್ಚದ ಯೋಜನೆಗೆ ರಾಜ್ಯ ಸರ್ಕಾರ ಎಸ್ಪಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿದೆ. ವಿಜಯ ನಗರ ಜಿಲ್ಲೆಯ ಕೂಡ್ಲಿಗಿ, ದಾವಣಗೆರೆ ಜಿಲ್ಲೆಯ ಜಗಳೂರು, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ತುಮಕೂರು ಜಿಲ್ಲೆಯ ಪಾವಗಡ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮೀಣ ಪ್ರದೇಶಗಳಿಗೆ ತುಂಗ ಭದ್ರಾ ಜಲಾಶಯದ ಹಿನ್ನೀರಿನಿಂದ ಕುಡಿವ ನೀರು ಪೂರೈಕೆ ಮಾಡಲಾಗುತ್ತಿದೆ.

ಈ ಯೋಜನೆಗೆ ಎಸ್ಪಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿಕೊಂಡಿರುವುದರ ಬಗ್ಗೆ ರಾಜ್ಯ ಸರ್ಕಾರ ತನ್ನ ನೈತಿಕ ಆಯಾಮದಲ್ಲಿ ಸಮಜಾಯಿಷಿ ನಿೀಡಿದೆ. ಕೂಡ್ಲಿಗಿ, ಜಗಳೂರು, ಮೊಳಕಾಲ್ಮೂರು, ಚಳ್ಳಕೆರೆ ವಿಧಾನಸಭೆ ಕ್ಷೇತ್ರಗಳು ಪರಿಶಿಷ್ಟ ಪಂಗಡ( ಎಸ್ಟಿ)ಕ್ಕೆ ಹಾಗೂ ಪಾವಗಡೆ ಪರಿಶಿಷ್ಟ ಜಾತಿ(ಎಸ್ಸಿ) ಗೆ ಮೀಸಲಾಗಿದೆ. ಹಾಗಾಗಿ ಈ ಸಮುದಾಯಗಳಿಗೆ ಕಾಯ್ದಿಟ್ಟ ಅನುದಾನ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದೆ.

ತುಂಗ ಭದ್ರಾ ಹಿನ್ನೀರು ಕಾಮಗಾರಿಗೆ ಎಸ್ಪಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಲು ರಾಜ್ಯ ಸರ್ಕಾರ ಹರಿಯ ಬಿಟ್ಟ ಆಲೋಚನಾ ಕ್ರಮಗಳನ್ನು ಭದ್ರಾ ಮೇಲ್ದಂಡೆಗೂ ಪರಿಗಣಿಸಬೇಕೆಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಆಗ್ರಹಿಸುತ್ತದೆ. ಭದ್ರಾ ಮೇಲ್ದಂಡೆ ವ್ಯಾಪ್ತಿಗೆ ಹೊಳಲ್ಕೆರೆ, ಪಾವಗಡ(ಪರಿಶಿಷ್ಟ ಜಾತಿ),ಮೊಳಕಾಲ್ಮುರು, ಚಳ್ಳಕೆರೆ, ಜಗಳೂರು( ಪರಿಶಿಷ್ಟ ಪಂಗಡ) ಸೇರಿ ಐದು ಮೀಸಲು ಕ್ಷೇತ್ರಗಳು ಬರುತ್ತವೆ. ಸಾಲದೆಂಬಂತೆ ಚಿತ್ರದುರ್ಗ ಲೋಕಸಭೆ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಹಾಗಾಗಿ ತುಂಗ ಭದ್ರಾ ಹಿನ್ನೀರು ಯೋಜನೆಗೆ ಎಸ್ಪಿಪಿ , ಟಿಎಸ್ಪಿ ಅನುದಾನ ಬಳಕೆ ಮಾಡಿದ ರೀತಿ ಭದ್ರಾ ಮೇಲ್ದಂಡೆಗೂ ವಿನಿಯೋಗಿಸಬಹುದಾಗಿದೆ.

ತನ್ನ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಗೆ ಕಳೆದ ಎರಡು ವರ್ಷಗಳಲ್ಲಿ 32 ಸಾವಿರಕೋಟಿರು ಎಸ್ಸಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿಕೊಂಡಿರುವುದರ ಬಗ್ಗೆ ಶಾಸನ ಸಭೆಯಲ್ಲಿಯೇ ಸಿಎಂ ಹೇಳಿಕೆ ನೀಡಿದ್ದಾರೆ. ಗ್ಯಾರಂಟಿಗಳಿಗೆ ಎಸ್ಪಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿಕೊಳ್ಳುವುದಾದರೆ ಭದ್ರಾ ಮೇಲ್ದಂಡೆಗೆ ಏಕಿಲ್ಲವೆಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಪ್ರಶ್ನೆ ಮಾಡಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗ ಉದಾಸೀನ ಮನೋಭಾವ ಗಮನಿಸಿದರೆ ಭದ್ರಾ ಮೇಲ್ದಂಡೆ ಕಾಮಗಾರಿ ಪೂರ್ಣಗೊಳಿಸಲು ಇನ್ನೊಂದು ದಶಕ ಬೇಕೆನಿಸುತ್ತದೆ. ಅಲ್ಲದೇ ಯೋಜನಾವ ವೆಚ್ಚವು ಜಾಸ್ತಿಯಾಗುತ್ತದೆ. ಯೋಜನಾ ವ್ಯಾಪ್ತಿಯಲ್ಲಿ ಬರುವ ಶಾಸಕರು ತಕ್ಷಣವೇ ಸಿಎಂ ಸಿದ್ದರಾಮಯ್ಯ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ಒತ್ತಡ ಹೇರಿ ಎಸ್ಪಿಪಿ, ಟಿಎಸ್ಪಿ ಅನುದಾನ ಪಡೆದು ಕಾಮಗಾರಿ ಪೂರ್ಣಗೊಳಿಸುವಂತೆ ಸಮಿತಿ ಆಗ್ರಹಿಸುತ್ತದೆ.
ಕೃಷ್ಣಾ ಜಲಭಾಗ್ಯದ ರೀತಿ ಭದ್ರಾ ಮೇಲ್ದಂಡೆಗೂ ನೀರಾವರಿ ಬಾಂಡ್ ಬಿಡುಗಡೆ ಮಾ್ಡಿ ಸಂಪನ್ಮೂಲ ಕ್ರೋಡೀಕರಣ ಮಾಡುವಂತೆ ಹಿಂದೊಮ್ಮೆ ನೀರಾ್ವರಿ ಅನುಷ್ಠಾನ ಹೋರಾಟ ಸಮಿತಿ ರಾಜ್ಯ ಸರ್ಕಾರವ ಆಗ್ರಹಿಸಿತ್ತು. ಈಗಲೂ ಕಾಲ ಮಿಂಚಿಲ್ಲ, ಬಾಂಡ್ ಬಿಡುಗಡೆ ಮಾಡಿದರೆ ಕೊಂಡುಕೊಳ್ಳುವವರು ಇದ್ದಾರೆ. ಸರ್ಕಾರ ಈ ಬಗ್ಗೆಯೂ ಚಿಂತಿಸಲಿ ಎಂದು ಸಮಿತಿ ಒತ್ತಾಯಿಸುತ್ತದೆ.

ಭದ್ರಾ ಮೇಲ್ದಂಡೆ ಅನುದಾನ ಬಿಡುಗಡೆ ಸಂಬಂಧ ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದವೆ. ಈ ಸಂಬಂಧ ವಕೀಲರ ಸಂಪರ್ಕಿಸಲಾಗಿದೆ. ತುಂಗ ಭದ್ರಾ ಹಿನ್ನೀರು ಯೋಜನೆಗೆ ಎಸ್ಪಿಪಿ ಟಿಎಸ್ಪಿ ಅನುದಾನ ಬಳಕೆ ಮಾಡಿಕೊಳ್ಳಲಾಗಿದ್ದು ಅದೇ ರೀತಿ ಭದ್ರಾ ಮೇಲ್ದಂಡೆಗೂ ಬಳಕೆ ಮಾಡುವಂತೆ ಸಾರ್ವಜನಿಕ ಹಿತಾಸಕ್ತಿ ರಿಟ್ ಸಲ್ಲಿಸುವುದಾಗಿ ಬಿ.ಎ.ಲಿಂಗಾರೆಡ್ಡಿ ಹೇಳಿದರು.

ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ, ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ, ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನ ಮಾಳಿಗೆ ಧನಂಜಯ, ಮಾಜಿ ಅಧ್ಯಕ್ಷ ಬಸ್ತಿಹಳ್ಳಿ ಸುರೇಶ್ ಬಾಬು,ಉಪಾಧ್ಯಕ್ಷ ಮಲ್ಲಾಪುರ ತಿಪ್ಪೇಸ್ವಾಮಿ ಇದ್ದರು.

Share. Facebook Twitter Pinterest LinkedIn Tumblr Email
Previous Articleಮುಖ್ಯಮಂತ್ರಿ ಭೇಟಿಯಾದ ಮಾಜಿ ಉಪ ಮುಖ್ಯಮಂತ್ರಿ, ಸಂಸದ ಗೋವಿಂದ ಕಾರಜೋಳ ನೇತೃತ್ವದ ಮಾದಿಗ ಸಮುದಾಯದ ನಿಯೋಗ
Next Article ದೇವಸ್ಥಾನಗಳನ್ನು ಸ್ಚಚ್ಛತೆ ಮಾಡಿದರೆ ಆತ್ಮತೃಪ್ತಿಗೆ ದಾರಿ ಕ್ಷೇತ್ರ ಯೋಜನಾಧಿಕಾರಿ ಶಿವಣ್ಣ
Kumar
  • Website

Related Posts

Boho Casino Test: Spiele, Boni & Auszahlungen

July 5, 2026

Ivibet Casino im Test: Spiele, Boni & Auszahlungen

July 2, 2026

Boho Casino im Test: Spiele, Boni und Auszahlung

June 30, 2026
Leave A Reply Cancel Reply

Search
Tags
Amazing gadgets Apartment guides Biggest fashion angel Brave Business Business insurances Business schools casino 770 Cheapest flights click here culture Culture tips Electronic devices Fashion Feature featured fitness Flight scanners Food Good stock quotes Hotel deals Interview questions Kingmaker Casino leisure Lifestyle Link Makeup artists Music Open source software Rock fame Sports Staff Pick Stockcharts Studio apartments Tech Tech reviews Topic Tower Rush Travel packages Trending Trip activities VoltageBet bonus review VoltageBet crypto deposits VoltageBet deposit bonus VoltageBet PayPal casino

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

Boho Casino Test: Spiele, Boni & Auszahlungen

Ivibet Casino im Test: Spiele, Boni & Auszahlungen

Boho Casino im Test: Spiele, Boni und Auszahlung

Hexabet Casino Test: Spiele, Boni und Auszahlungen

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

Boho Casino Test: Spiele, Boni & Auszahlungen

July 5, 2026

Ivibet Casino im Test: Spiele, Boni & Auszahlungen

July 2, 2026

Boho Casino im Test: Spiele, Boni und Auszahlung

June 30, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.