Close Menu
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
Facebook X (Twitter) Instagram
Monday, July 6
Facebook X (Twitter) Instagram LinkedIn VKontakte
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
chitradurga hoysala
  • HOME
  • ದೇಶ ವಿದೇಶ
  • ಜಿಲ್ಲಾ ಸುದ್ದಿ
  • ಅಪರಾಧ
  • ಸಂಪಾದಕರ ನೋಟ
You are at:Home » Blog » ಅಲೆಮಾರಿಗಳಿಗೆ ಮುಖ್ಯವಾಹಿನಿಗೆ ವಿಶೇಷ ಪ್ಯಾಕೇಜ್ ಅಗತ್ಯ: ಪತ್ರಿಕಾಗೋಷ್ಠಿಯಲ್ಲಿ ಎಚ್.ಆಂಜನೇಯ ಹೇಳಿಕೆ
Uncategorized

ಅಲೆಮಾರಿಗಳಿಗೆ ಮುಖ್ಯವಾಹಿನಿಗೆ ವಿಶೇಷ ಪ್ಯಾಕೇಜ್ ಅಗತ್ಯ: ಪತ್ರಿಕಾಗೋಷ್ಠಿಯಲ್ಲಿ ಎಚ್.ಆಂಜನೇಯ ಹೇಳಿಕೆ

KumarBy KumarSeptember 10, 2025No Comments2 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email
Spread the love

ಬಡ್ತಿಯಲ್ಲಿ ಬೇಕು ಒಳಮೀಸಲಾತಿ; ಎಚ್.ಆಂಜನೇಯ

ಅಲೆಮಾರಿಗಳಿಗೆ ಮುಖ್ಯವಾಹಿನಿಗೆ ವಿಶೇಷ ಪ್ಯಾಕೇಜ್ ಅಗತ್ಯ:

ಪತ್ರಿಕಾಗೋಷ್ಠಿಯಲ್ಲಿ ಎಚ್.ಆಂಜನೇಯ ಹೇಳಿಕೆ

ಚಿತ್ರದುರ್ಗ ಹೊಯ್ಸಳ ನ್ಯೂಸ್ /

ಚಿತ್ರದುರ್ಗ:

ಮಾದಿಗರ ಧೀರ್ಘ ಕಾಲದ ಹೋರಾಟದ ಫಲ, ಸಿದ್ದರಾಮಯ್ಯ ಸರ್ಕಾರ ಒಳಮೀಸಲಾತಿ ನೀಡಿರುವುದು ನಮ್ಮೆಲ್ಲರಿಗೂ ತೃಪ್ತಿ ಇದೆ. ಆದರೆ, ಕೆಲ
ಗೊಂದಲದ ಮಾತುಗಳು ಸಮಾಜದಲ್ಲಿ ಹರಿದಾಡುತ್ತಿದ್ದು, ಅದಕ್ಕೆ ಅಂತ್ಯ
ಹಾಡುವ ಕೆಲಸ ಮಾಡಬೇಕೆಂದು ಮಾಜಿ ಸಚಿವ ಹೆಚ್.ಆಂಜನೇಯ ಆಗ್ರಹಿಸಿದರು.

ನಗರದ ದುರ್ಗದ ಸಿರಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ
ಮಾತನಾಡಿ, ಸುಪ್ರೀಂ ಕೋರ್ಟ್ ತೀರ್ಪು ತಕ್ಷಣವೇ ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಎಲ್ಲ ರೀತಿಯ ಕ್ರಮಕೈಗೊಂಡರು. ಎ.ಬಿ.ಸಿ. ಗುಂಪುಗಳನ್ನಾಗಿಸಿ ಮೀಸಲಾತಿ ಹಂಚಿಕೆ ಮಾಡಿದ್ದಾರೆ. ನಮಗೆ ಶೇ.7 ಸಿಗಬೇಕಿತ್ತು. ಆದರೆ, ಹಸಿವನಲ್ಲಿದ್ದ ನಮಗೆ ಅನ್ನ ಸಿಕ್ಕಷ್ಟೇ ಸಂತಸವಾಗಿದೆ. ಈ ಕಾರಣಕ್ಕೆ ವಿಜಯೋತ್ಸವ ಆಚರಿಸಿದ್ದೇವೆ, ಕೃತಜ್ಞತೆ ಸಲ್ಲಿಸಿದ್ದೇವೆ ಎಂದರು.

ಮುಖ್ಯವಾಗಿ ನೌಕರರ ಭಡ್ತಿ ನೀತಿಯಲ್ಲಿ ಒಳಮೀಸಲಾತಿ ಅನ್ವಯಿಸುವುದಿಲ್ಲವೆಂಬ ಗೊಂದಲದ ಮಾತುಗಳು ಹರಿದಾಡುತ್ತಿವೆ. ಇದನ್ನು ಸರ್ಕಾರ ಸರಿಪಡಿಸಬೇಕು. ಇಲ್ಲದಿದ್ದರೇ ಒಳಮೀಸಲಾತಿ ಅರ್ಥವೇ ಕಳೆದುಕೊಳ್ಳುತ್ತದೆ ಎಂದು ಹೇಳಿದರು.

ಎಕೆ, ಎಡಿ, ಎಎ ಗುಂಪನ್ನು ಎ ಮತ್ತು ಬಿ ಗುಂಪಿಗೆ ಹಂಚಿಕೆ
ಮಾಡಿರುವುದು ಕೂಡ ಬಹಳಷ್ಟು ಗೊಂದಲ ಆಗಿದೆ. ಜೊತೆಗೆ ವಿದ್ಯಾವಂತರು ಕೂಡ ಈ ವಿಷಯದಲ್ಲಿ ಗೊಂದಲದಲ್ಲಿ ಮುಳುಗಿದ್ದಾರೆ. ಮಾದಿಗ ಮತ್ತು ಛಲವಾದಿ ಎರಡು ಗುಂಪಿನಲ್ಲಿ ಜಾತಿ ಗುರುತಿಸಿಕೊಳ್ಳದ ಎಕೆ, ಎಡಿ, ಎಎ ಲಾಭ ಪಡೆಯಲಿದ್ದಾರೆ. ಎನ್ನಲಾಗುತ್ತಿದೆ. ಈ ರೀತಿ ಆಗದ ರೀತಿ ಜಾತಿಗುರುತಿಸಿಕೊಳ್ಳದ 4,74,954 ಮಂದಿ ವಿವರನ್ನು ಸಾರ್ವನಿಕವಾಗಿ ಪ್ರಕಟಿಸಬೇಕು. ಜೊತೆಗೆ ಅವರು ಮೂಲ ಜಾತಿ ಗುರುತಿಸಿಕೊಂಡು ಎ ಅಥವಾ ಬಿ ಗುಂಪಿನಲ್ಲಿ ಮೀಸಲಾತಿ ಸೌಲಭ್ಯ ಪಡೆಯಬೇಕು. ಈ ಸಂಬಂಧ ಸುತ್ತೋಲೆ ಹೊರಡಿಸಬೇಕೆಂದು ಆಗ್ರಹಿಸಿದರು.

ಪರಿಶಿಷ್ಟ ಜಾತಿಯಲ್ಲಿನ ಆದಿಕರ್ನಾಟಕ, ಆದಿದ್ರಾವಿಡ ವರ್ಗಗಳಿಗೆ ಜಾತಿ ಪ್ರಮಾಣ ಪತ್ರ ನೀಡುವ ಸಂದರ್ಭ ಅವರ ವಂಶವೃಕ್ಷ ಜಾಲಾಟ ನಡೆಸಬೇಕು. ಇಲ್ಲದಿದ್ದರೆ ಮೀಸಲಾತಿಗೆ ಕನ್ನ ಹಾಕುವ ಗ್ಯಾಂಗ್ ತನ್ನ ಕೃತ್ಯವನ್ನು ಮುಂದುವರಿಸಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಈ ಸಂಬಂಧ ಡಿಸಿ, ತಹಸೀಲ್ದಾರ್ ಅವರಿಗೆ ಜಾತಿಪ್ರಮಾಣ ಪತ್ರ ವಿತರಣೆ ವೇಳೆ ವಂಶವೃಕ್ಷದ ಜೊತೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಸೂಚಿಸಬೇಕು. ಜೊತೆಗೆ ರಾಜ್ಯದಲ್ಲಿ ಖಾಲಿ ಇರುವ
ಹುದ್ದೆಗಳೆಷ್ಟು, ನೇಮಕಾತಿ ಪ್ರಕ್ರಿಯೆಯಲ್ಲಿರುವುದು ಎಷ್ಟೆಂದು ಕೂಲಂಕಷವಾಗಿ ಸಾರ್ವನಿಕವಾಗಿ ಪ್ರಕಟಿಸಬೇಕು ಎಂದು ಆಗ್ರಹಿಸಿದರು.

ನಮಗೆಲ್ಲ ಸಮಾಧಾನವಾಗಿದ್ದರೇ, ಅಲೆಮಾರಿ ಸಮುದಾಯಗಳಿಗೆ
ಅನ್ಯಾಯವಾಗಿದೆ. ಇದು ಅತ್ಯಂತ ನೋವಿನ ವಿಷಯ. ಆದ್ದರಿಂದ ಅಲೆಮಾರಿಗಳ ವಿಷಯದಲ್ಲಿ ಲಂಬಾಣಿ, ಭೋವಿ, ಛಲವಾದಿ, ಮಾದಿಗ ಸಮುದಾಯ ತಾಯಿ ಹೃದಯದಲ್ಲಿ ಚಿಂತನೆ ನಡೆಸಬೇಕು. ಅವರಿಗೆ ಮಮಕಾರದ ಜೊತೆಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು. ಅವರಿಗೆ ಶೇ.1 ಮೀಸಲಾತಿ ಕಲ್ಪಿಸಲು ಸರ್ಕಾರ ಬದ್ಧತೆ ಪ್ರದರ್ಶಿಸಬೇಕೆಂದು ಒತ್ತಾಯಿಸಿದರು.

ಅಲೆಮಾರಿಗಳು ಮುಖ್ಯವಾಹಿನಿಗೆ ಬರಲು ವಿಶೇಷ ಪ್ಯಾಕೇಜ್, ನಿಗಮ ಸ್ಥಾಪನೆ, ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ತಕ್ಷಣವೇ ಸರ್ಕಾರ ಮುಂದಾಗಬೇಕು. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದು, ಸ್ಪಂದನೆ ದೊರೆತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಲಿಡ್ಕರ್ ಮಾಜಿ ಅಧ್ಯಕ್ಷ ಓ.ಶಂಕರ್, ವಕೀಲ ರವೀಂದ್ರ, ಕಾಂಗ್ರೆಸ್ ಎಸ್‍ಟಿ ಘಟಕದ ತಾಲೂಕು ಅಧ್ಯಕ್ಷ ಅನಿಲ್‍ಕೋಟಿ, ಎಲ್‍ಐಸಿ ಈರಣ್ಣಯ್ಯ, ದಾದಾಪೀರ್ ಇತರರಿದ್ದರು.

ಮೀಸಲಾತಿ ಕಳ್ಳರ ಗ್ಯಾಂಗ್

ಮೀಸಲಾತಿ ಸೌಲಭ್ಯ ಅಸ್ಥಿತ್ವಕ್ಕೆ ಬಂದಾಗಿನಿಂದಲೂ ಅನೇಕರು ಎಸ್ಸಿ ಪಟ್ಟಿಯಲ್ಲಿ ನುಸುಳಿ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ. ಈಗ ಅದಕ್ಕೆ ಕಡಿವಾಣ ಹಾಕಲು ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಂಜನೇಯ ಹೇಳಿದರು.
ಮುಖ್ಯವಾಗಿ ಮೀಸಲಾತಿ ಕಳ್ಳರ ಗ್ಯಾಂಗ್ ತನ್ನ ಕೃತ್ಯ ಮುಂದುವರಿಸದಂತೆ ಎಚ್ಚರವಹಿಸಬೇಕು. ಈ ಸಂಬಂಧ ನಾವುಗಳು ತಾಲ್ಲೂಕುವಾರು ಮಾದಿಗ ಮೀಸಲಾತಿ ರಕ್ಷಣಾ ಸಮಿತಿ ರಚಿಸಿ, ಉದ್ಯೋಗ, ಉನ್ನತ ಶಿಕ್ಷಣದಲ್ಲಿ ಸ್ಥಾನ ಪಡೆದವರ ಬೆನ್ನತ್ತಿ ಅವರ ಮೂಲ ಜಾತಿ ತಲಾಶ್ ಮಾಡುತ್ತೇವೆ. ಒಂದೊಮ್ಮೆ ಸುಳ್ಳು ದಾಖಲೆ ಪಡೆದಿದ್ದಾರೆ ಅವರ ವಿರುದ್ಧ ದೂರು ಕೊಟ್ಟು ಜೈಲಿಗೆ ಕಳುಹಿಸುವ ಕೆಲಸ ಮಾಡಲಾಗುತ್ತದೆ ಎಂದು
ಹೇಳಿದರು.

ಜಾತಿ ನಾಶ ಅಸಾಧ್ಯ

ಜಾತಿ ವ್ಯವಸ್ಥೆ ಬಹಳ ಬಲವಾಗುತ್ತಲೇ ಇದೆ. ಪ್ರಪಂಚ ಇರುವವರೆಗೂ ಜಾತಿ ಇರುತ್ತದೆ. ಸತ್ತಾಗ ಹೂಳುವ ಸಂದರ್ಭ ಜಾತಿ ಇರಬೇಕಾದರೆ, ಅದು ನಾಶಗೊಳ್ಳುತ್ತದೆ ಎಂಬುದು ಭ್ರಮೆ. ಜಾತಿಗಣತಿ ಸಮೀಕ್ಷೆ ವೇಳೆ ಜಾತಿ ಬರೆಸಿಲ್ಲದಿರುವುದು ಜಾತಿ ವ್ಯವಸ್ಥೆ ಕಾರಣಕ್ಕೆ. ಬಹಳಷ್ಟು ಮಂದಿ ಸ್ವಾಭಿಮಾನದಿಂದ ಜಾತಿ ಹೇಳಿಕೊಳ್ಳುವುದಿಲ್ಲ. ಅವರು ದಡ್ಡರು.
ಎಚ್.ಆಂಜನೇಯ ಮಾಜಿ ಸಚಿವ

Share. Facebook Twitter Pinterest LinkedIn Tumblr Email
Previous ArticlePin-Up APK: Official Casino App Download for Android & iOS
Next Article ಒಳಮೀಸಲಾತಿ ಜಾರಿ ವಿಜಯೋತ್ಸವ ಮತ್ತು ಕೃತಜ್ಞತಾ ಸಮರ್ಪಣೆ ಕಾರ್ಯಕ್ರಮಕ್ಕೆ ಬನ್ನಿ – ಎಂ.ದುರ್ಗೇಶ್ ಪೂಜಾರ್
Kumar
  • Website

Related Posts

Boho Casino Test: Spiele, Boni & Auszahlungen

July 5, 2026

Ivibet Casino im Test: Spiele, Boni & Auszahlungen

July 2, 2026

Boho Casino im Test: Spiele, Boni und Auszahlung

June 30, 2026
Leave A Reply Cancel Reply

Search
Tags
Amazing gadgets Apartment guides Biggest fashion angel Brave Business Business insurances Business schools casino 770 Cheapest flights click here culture Culture tips Electronic devices Fashion Feature featured fitness Flight scanners Food Good stock quotes Hotel deals Interview questions Kingmaker Casino leisure Lifestyle Link Makeup artists Music Open source software Rock fame Sports Staff Pick Stockcharts Studio apartments Tech Tech reviews Topic Tower Rush Travel packages Trending Trip activities VoltageBet bonus review VoltageBet crypto deposits VoltageBet deposit bonus VoltageBet PayPal casino

Corporate clients and leisure travelers has been relying on Groundlink for dependable safe, and professional chauffeured car end service in major cities across World.

  • Facebook
  • Twitter
  • Instagram
  • Pinterest
Don't Miss

Boho Casino Test: Spiele, Boni & Auszahlungen

Ivibet Casino im Test: Spiele, Boni & Auszahlungen

Boho Casino im Test: Spiele, Boni und Auszahlung

Hexabet Casino Test: Spiele, Boni und Auszahlungen

ಚಿತ್ರದುರ್ಗ ಹೊಯ್ಸಳ ನ್ಯೂಸ್ – ಚಿತ್ರದುರ್ಗ ಜಿಲ್ಲೆಯ ತಾಜಾ ಸುದ್ದಿಗಳು, ರಾಜಕೀಯ, ಸಮಾಜ, ಸಂಸ್ಕೃತಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ಬೆಳವಣಿಗೆಗಳನ್ನು ತಲುಪಿಸುವ ವಿಶ್ವಾಸಾರ್ಹ ಕನ್ನಡ ಸುದ್ದಿ ಜಾಲತಾಣ.

Popular Posts

Boho Casino Test: Spiele, Boni & Auszahlungen

July 5, 2026

Ivibet Casino im Test: Spiele, Boni & Auszahlungen

July 2, 2026

Boho Casino im Test: Spiele, Boni und Auszahlung

June 30, 2026
Copyright © 2026 CHITRADURGA HOYSALA. Designed by WEBBRAHMA.
  • About
  • Contact
  • Advertise
  • Terms
  • FAQ
  • Policy

Type above and press Enter to search. Press Esc to cancel.