ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ ನಾಗತಿಹಳ್ಳಿಮಂಜುನಾಥ್ ಆಯ್ಕೆ
ಚಿತ್ರದುರ್ಗ ಹೊಯ್ಸಳ ಸುದ್ದಿ
ಹೊಸದುರ್ಗ:
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಅವರಣದ ಪತ್ರಕರ್ತರ ಭವನದಲ್ಲಿ ನಡೆದ ಚುನಾವಣೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾಗಿ ಪತ್ರಕರ್ತ ನಾಗತಿಹಳ್ಳಿಮಂಜುನಾಥ್ ೮೮ ಮತಗಳನ್ನು ಪಡೆಯುವ ಮೂಲಕ ಜಯಶೀಲರಾಗಿದ್ದಾರೆ.
ನಾಗತಿಹಳ್ಳಿಮಂಜುನಾಥ್ ಕಳೆದ ೨೫ ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದು ಕಳೆದ ಎರಡು ಅವಧಿಯಲ್ಲಿಯೂ ಸಹಾ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಸಂಘದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿರುವ ಇವರು ಇದೀಗ ಜಿಲ್ಲಾ ಘಟಕದ ಚುನಾವಣೆಯಲ್ಲಿ ಸ್ಪರ್ಧಿಸಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಇದೆ ಚುನಾವಣೆಯಲ್ಲಿ ತಾಲೂಕಿನ ಮತ್ತೋರ್ವ ಪತ್ರಕರ್ತ ವಿಶ್ವನಾಥ್ ಶ್ರೀರಾಂಪುರ ಇವರು ೮೨ ಮತಗಳನ್ನು ಪಡೆದು ಜಿಲ್ಲಾ ನಿರ್ದೇಶಕರಾಗಿ ಅಯ್ಕೆಯಾಗಿದ್ದಾರೆ.
