ಇ-ಸ್ವತ್ತು ನೀಡುವ ವಿಚಾರದಲ್ಲಿ ಅಧಿಕಾರಿಗಳ ತಾತ್ಸಾರ – ಶಾಸಕ ಗೋವಿಂದಪ್ಪ ಗರಂ
ಚಿತ್ರದುರ್ಗ ಹೊಯ್ಸಳ ಸುದ್ದಿ.
ಹೊಸದುರ್ಗ:
ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಇತೀಚಿಗೆ ನಡೆದ ಸಭೆಯ ಅಧ್ಯಕ್ಷತೆವಹಿಸಿ ಶಾಸಕ ಬಿ.ಜಿ.ಗೋವಿಂದಪ್ಪ
ಮಾತನಾಡಿದ ಅವರು ಅಧಿಕಾರಿಗಳು ಕೇವಲ ತೋರಿಕೆಗಾಗಿ ಕೆಲಸ ಮಾಡದೇ ಪ್ರಾಮಾಣಿಕವಾಗಿ ಕೆಲಸ ಮಾಡಿ.ಪಟ್ಟಣದಲ್ಲಿ ವಿದ್ಯುತ್ ಸಮಸ್ಯೆ ಬಹಳಷ್ಟಿದೆ ಮನೆ ಹಾಗೂ ಪಂಪ್ಸೆಟ್ಗಳಿಗೆ ಸಮಯಕ್ಕೆ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ.
ವ್ಯರ್ಥ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು ಕೆಲಸ ನಿರ್ವಹಿಸಿ ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಇ- ಸ್ವತ್ತು ನೀಡುವ ವಿಚಾರದಲ್ಲಿ ಸಾರ್ವಜನಿಕರನ್ನು ಪದೇ ಪದೇ ಅಲೆದಾಡಿಸಲಾಗುತ್ತಿದೆ.
ಈ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ.ಸಮಯಕ್ಕೆ ಸರಿಯಾಗಿ ಇ ಸ್ವತ್ತು ನೀಡಲು ಏನು ಸಮಸ್ಯೆ ನಿಮಗೆ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.
ಹೊಸದುರ್ಗ ಪುರಸಭೆಯಲ್ಲಿ ಇ-ಖಾತೆ ಬಹಳಷ್ಟು ಬಾಕಿ ಇವೆ. ಸಮಯಕ್ಕೆ ಸರಿಯಾಗಿ ಸಾರ್ವಜನಿಕರಿಗೆ ವಿಲೇವಾರಿ ಆಗುತ್ತಿಲ್ಲ,ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದು ಚಿತ್ರದುರ್ಗ ಉಪವಿಭಾಗಾಧಿಕಾರಿ ಕಾಂತರಾಜು ಕೆ.ಟಿ ಹೇಳಿದರು.
ವೇದಾವತಿ ನದಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರಿದೆ ಕೊಳವೆ ಬಾವಿ ಓವರ್ ಹೆಡ್ ಟ್ಯಾಂಕ್ ಇದ್ದರೂ ಪಟ್ಟಣದಲ್ಲಿ ಸಮಯಕ್ಕೆ ಸರಿಯಾಗಿ ನೀರು ಸರಬರಾಜು ಆಗುತ್ತಿಲ್ಲವೆಂಬ ದೂರುಗಳು ಕೇಳಿ ಬರುತ್ತಿವೆ ಎಲ್ಲಾ ಬಡಾವಣೆಗಳಿಗೂ ನೀರು ಒದಗಿಸಿ ಎಂದರು.
ಈ ವೇಳೆ ಪುರಸಭೆ ಮುಖ್ಯಾಧಿಕಾರಿ ನಾಗಭೂಷಣ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪುರಸಭೆ ಸಿಬ್ಬಂದಿ ಇದ್ದರು.
