ಕಡ್ಲೆ ಖರೀದಿ ಕೇಂದ್ರ ಉದ್ಘಾಟಿಸಿದ ಶಾಸಕಿ ಪೂರ್ಣಿಮಾ ಶ್ರೀನಿವಾಸ್
1 min readಹಿರಿಯೂರು ತಾಲ್ಲೂಕು ಬಬ್ಬೂರು ಗ್ರಾಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ವತಿಯಿಂದ ಕಡ್ಲೆ ಖರೀದಿ ಕೇಂದ್ರವನ್ನು ಶಾಸಕರಾದ ಕೆ. ಪೂರ್ಣಿಮಾ ಶ್ರೀನಿವಾಸ ರವರು ಉದ್ಘಾಟನೆ ನೆರವೇರಿಸಿದರು. ಶಾಸಕಿಯಾಗಿ ಸತತವಾಗಿ 3ನೇ ಬಾರಿಗೆ ಖರೀದಿ ಕೇಂದ್ರವನ್ನು ತೆರೆದಿರುವುದಕ್ಕೆ ರೈತರು ಶಾಸಕರಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಪಂ ಸದಸ್ಯ ಯಶವಂತರಾಜು, ಬಿಜೆಪಿ ಮಾಜಿ ಅಧ್ಯಕ್ಷ ದ್ಯಾಮೆಗೌಡ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಏಕಾಂತಪ್ಪ, ಕರಿಯಪ್ಪ, ಯತೀಶ್, ಧನಂಜಯ, ಶೈಲಜಾ, ಸಣ್ಣ ತಿಮ್ಮಪ್ಪ, ತಿಪ್ಪೇಸ್ವಾಮಿ ಮುಖಂಡರಾದ ತಮ್ಮಣ್ಣ, ಸುರೇಶ್, ಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.