ನಿಗದಿತ ಶುಲ್ಕಕ್ಕಿಂತ ಹೆಚ್ಚಿಗೆ ಹಣ ವಸೂಲಿ ಮಾಡಿದರೆ ಮುಲಾಜಿಲ್ಲದೆ ಕ್ರಮ: ಡಿಡಿಪಿಐ
1 min readನಿಗಧಿತ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ಪಡೆದರೆ ಕ್ರಮ
******
ಚಿತ್ರದುರ್ಗ,ಏಪ್ರಿಲ್17:
ಜಿಲ್ಲೆಯ ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಆಡಳಿತ ಮಂಡಳಿಯವರು ಸರ್ಕಾರ ನಿಗಧಿ ಪಡಿಸಿದ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ವಸೂಲಾತಿ ಮಾಡುತ್ತಿರುವುದು ಕಂಡುಬಂದಲ್ಲಿ ಅಂತಹ ಶಾಲೆಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೆ.ರವಿಶಂಕರ್ ರೆಡ್ಡಿ ತಿಳಿಸಿದ್ದಾರೆ.
2020-21ನೇ ಸಾಲಿನ ಅವಧಿಯಲ್ಲಿ ಕೋವಿಡ್-19ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 01 ರಿಂದ 10ನೇ ತರಗತಿವರೆಗೂ ಶಾಲೆಗಳು ಸರಿಯಾಗಿ ನಡೆದಿರುವುದಿಲ್ಲ. ಈ ಸಮಯದಲ್ಲಿ ಆರ್ಥಿಕ ಚಟುವಟಿಕೆಗಳು ಕಡಿತಗೊಂಡಿರುವುದರಿಂದ ಅನೇಕ ಪೋಷಕರು ಆರ್ಥಿಕ ಮುಗ್ಗಟ್ಟನ್ನು ಎದುರಿಸಿರುತ್ತಾರೆ. ಆದರೂ ಸಹ ಜಿಲ್ಲೆಯಲ್ಲಿ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮುಖ್ಯಸ್ಥರು ಆಡಳಿತ ಮಂಡಳಿಯವರ ನಿರ್ದೇಶನದಂತೆ 01 ರಿಂದ 10ನೇ ತರಗತಿಯವರೆಗೆ ದಾಖಲಾಗಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಪೋಷಕರಿಂದ ಬಲವಂತವಾಗಿ ಸರ್ಕಾರ ನಿಗಧಿ ಪಡಿಸಿರುವ ಹಿಂದಿನ ವರ್ಷದ ಶುಲ್ಕಕ್ಕಿಂತ ಶೇ.70ಕಿಂತಲೂ ಹೆಚ್ಚು ವಸೂಲಾತಿ ಮಾಡಿರುವುದಾಗಿ ಏಪ್ರಿಲ್ 16ರಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ವಿಷಯ ಚರ್ಚೆಗೆ ಬಂದಿದೆ.
ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಶುಲ್ಕಕ್ಕಿಂತ ಹೆಚ್ಚಿಗೆ ಶುಲ್ಕವನ್ನು ವಸೂಲಾತಿ ಮಾಡುತ್ತಿರುವುದು ಕಂಡುಬಂದಲ್ಲಿ ಅಂತಹ ಶಾಲೆಗಳ ವಿರುದ್ಧ ಇಲಾಖಾ ವತಿಯಿಂದ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.