ಜಿಲ್ಲೆಯ ಹಲವೆಡೆ ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿದ್ದ 14 ಜನರು ಗುಣಮುಖರಾಗಿ ಬಿಡುಗಡೆ ಡಾ.ತುಳಸಿ ರಂಗನಾಥ್
1 min readಜಿಲ್ಲೆಯ ಹಲವೆಡೆ ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿದ್ದ 14 ಜನರು ಗುಣಮುಖರಾಗಿ ಬಿಡುಗಡೆ ಡಾ.ತುಳಸಿ ರಂಗನಾಥ್
ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ ಎಂಟು ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 36,452ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 4, ಚಳ್ಳಕೆರೆ 04 ಹಾಗೂ ಹೊಳಲ್ಕೆರೆ 2 ಪ್ರಕರಣ ಸೇರಿದಂತೆ ಒಟ್ಟು 10 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶುಕ್ರವಾರ 14 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶುಕ್ರವಾರ ಒಟ್ಟು 1070 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಕೋವಿಡ್ನಿಂದ ಇದುವರೆಗೆ ಒಟ್ಟು 203 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 36,055 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 194 ಸಕ್ರಿಯ ಪ್ರಕರಣಗಳು ಇವೆ. ಶುಕ್ರವಾರದ ಪಾಸಿಟಿವ್ ರೇಟ್ 0.93 ಇದ್ದು, ಕಳೆದ ಹತ್ತು ದಿನಗಳ ಪಾಸಿಟಿವ್ ರೇಟ್ 0.31 ಇದೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 4,97,170 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 7,65,533 ಜನರ ಮಾದರಿ ಸಂಗ್ರಹಿಸಲಾಗಿದ್ದು, 7,26,380 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 1835 ಜನರ ವರದಿ ಬರುವುದು ಬಾಕಿ ಇದೆ. 866 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.