ಶಾಸಕರ ಮನೆ ಮೇಲಿನ ದಾಳಿ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಮನವಿ .
1 min readಹೊಸದುರ್ಗ : ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ದಲಿತ ಶಾಸಕರ ಮನೆ ಮೇಲಿನ ದಾಳಿ ಖಂಡಿಸಿ ಕ್ರಮಕೈಗೊಳ್ಳಲು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕರು ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಶಾಂತಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ನಂತರ ಮಾತನಾಡಿದ ತಾಲ್ಲೂಕು ಸಂಚಾಲಕ ದೇವಿಗೆರೆ ಮಲ್ಲಿಕಾರ್ಜುನ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಅವರ ಮನೆಯನ್ನು ದ್ವಂಸ ಮಾಡಿದ್ದು ಖಂಡನೀಯ. ಈ ಘಟನೆ ಪೂರ್ವನಿಯೋಜಿತವಾಗಿದ್ದು ವಿವಿಧ ಸಂಘಟನೆಗಳು ಈ ಕೃತ್ಯದಲ್ಲಿ ಭಾಗಿಯಾಗಿದೆ ಎಂದು ಶಾಸಕರು ಶಂಕೆ ವ್ಯಕ್ತಪಡಿಸಿದ್ದು ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು ಎಂದು ಹೇಳಿದರು.
ಬಿಜೆಪಿ ಮುಖಂಡರಾದ ಗೂಳಿಹಟ್ಟಿ ಕೃಷ್ಣಮೂರ್ತಿ ಮಾತನಾಡಿ ಈ ಘಟನೆಯಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು. ಸೂಕ್ತ ಕಾನೂನು ಕ್ರಮ ಕೈಗೊಂಡು ಶಾಸಕರು ಹಾಗೂ ಅವರ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ ಎಂದರು.
ಈ ವೇಳೆ ಮುಖಂಡರಾದ ಆರ್ ಸುರೇಶ್, ಎಸ್.ಶಿವಪ್ಪ, ನಾಕಿಕೆರೆ ಹನುಮಂತಪ್ಪ, ಮಳಲಿ ರವಿಕುಮಾರ್, ಅಣ್ಣಪ್ಪ ಆಲದಹಳ್ಳಿ ಮತ್ತಿತ್ತರು ಹಾಜರಿದ್ದರು.