ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಪ್ರತಿಭಟನೆ
1 min readಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜಿ ಹಳ್ಳಿ ಗಲಭೆಗೆ ಕಾರಣವಾಗಿರುವ ಎಸ್ ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಹೊಸದುರ್ಗ ತಾಲ್ಲೂಕು ವಿಶ್ವ ಹಿಂದೂ ಪರಿಷದ್ ಬಜರಂಗದಳ ಗುರುವಾರ ಪ್ರತಿಭಟನೆ ನಡೆಸಿದರು.
ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಧ್ವಂಸಕ್ಕೆ ಯತ್ನಿಸಿದ ಕೃತ್ಯ ಖಂಡನೀಯ. ಅಲ್ಪಸಂಖ್ಯಾತರ ಮತ್ತು ಬಹುಸಂಖ್ಯಾತರ ಮೇಲೆ ಆಗುತ್ತಿರುವ ಕೃತ್ಯಗಳು ಮತ್ತೆ ಮರುಕಳಿಸದಂತೆ ಸರ್ಕಾರ ಎಚ್ಚರಿಕೆವಹಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ವೇಳೆ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್, ತಾಲೂಕು ಅಧ್ಯಕ್ಷ ವಕೀಲ ಶ್ರೀನಿವಾಸ ಮೂರ್ತಿ, ಕಾರ್ಯದರ್ಶಿ ನಂಜುಂಡಸ್ವಾಮಿ, ಉಪಾಧ್ಯಕ್ಷ ತಿಮ್ಮಣ್ಣ, ರಾಜು, ಕೃಷ್ಣಮೂರ್ತಿ, ಶ್ರೀನಿವಾಸ್, ಹಳೆಕುಂದೂರು ಯಶವಂತ್ ಇದ್ದರು.