May 2, 2024

Chitradurga hoysala

Kannada news portal

ಗ್ರಾನೈಟ್ಸ್ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಹಿಂಬದಿಯಿಂದ ಈಚರ್ ಲಾರಿ ಡಿಕ್ಕಿ ಗಂಭೀರ ಗಾಯಗೊಂಡಿದ ಚಾಲಕ ಸಾವು

1 min read

ಗ್ರಾನೈಟ್ಸ್ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಹಿಂಬದಿಯಿಂದ ಈಚರ್ ಲಾರಿ ಡಿಕ್ಕಿ ಗಂಭೀರ ಗಾಯಗೊಂಡಿದ ಚಾಲಕ ಸಾವು

ಚಿತ್ರದುರ್ಗ ಹೊಯ್ಸಳ :

ಚಳ್ಳಕೆರೆ:

ತಾಲೂಕಿನ ಸಾಣಿಕೆರೆ ಸಮೀಪದ ಹೊಟ್ಟಜನ ಕಪಿಲೆ ಗೇಟಿನಲ್ಲಿ ಗ್ರಾನೈಟ್ಸ್ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಹಿಂಬದಿಯಿಂದ ಈಚರ್ ಲಾರಿ ಚಾಲಕ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಲಾರಿ ಚಾಲಕ ಅಶೋಕ್ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ರಾತ್ರಿ 9 ಗಂಟೆಗೆ ನಡೆದಿದೆ.

ಗಾಯಾಳು ಅಶೋಕನನ್ನು ಸ್ಥಳೀಯರು ಹಾಗೂ ಪೊಲೀಸರು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಈ ಘಟನೆಯಲ್ಲಿ ಈಚರ್ ಲಾರಿ ಮುಂಭಾಗ ಪೂರ್ತಿ ಜಖಮ್ ಗೊಂಡಿದ್ದು ,ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರಾರ ಪಿ.ಐ ಕುಮಾರ್.ಕೆ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *