May 2, 2024

Chitradurga hoysala

Kannada news portal

ಮಾಂಸಹಾರ ಊಟ ಸೇವನೆ : ಸುಮಾರು 50ಕ್ಕೂ ಹೆಚ್ಚು ಜನರು ಅಸ್ವಸ್ಥ

1 min read

ಮಾಂಸಹಾರ ಊಟ ಸೇವನೆ : ಸುಮಾರು 50ಕ್ಕೂ ಹೆಚ್ಚು ಜನರು
ಅಸ್ವಸ್ಥ

ವರದಿ: ಕಾವೇರಿ ಮಂಜಮ್ಮನವರ್,

ಚಿತ್ರದುರ್ಗ ಹೊಯ್ಸಳ ಸುದ್ದಿ:

ಹೊಸದುರ್ಗ :

ತಾಲ್ಲೂಕಿನ ಹಳೇ ಕುಂದೂರು ಗ್ರಾಮದಲ್ಲಿ ಬುಧವಾರ ಸಂಜೆ ರಂಗಪ್ಪ ಎಂಬತನ ಮನೆಯ ದೇವರ ಕಾರ್ಯಕ್ರಮದಲ್ಲಿ, ಮಾಂಸಹಾರಿ ಊಟ ಮಾಡಿದ ಸುಮಾರು 50 ಜನರು ಅಸ್ವಸ್ಥರಾದ ಘಟನೆ ನಡೆದಿದೆ.

ಮಗಳ ಮದುವೆ ನಂತರ ರಂಗಪ್ಪನ ಮನೆಯಲ್ಲಿ ದೇವರ ಕಾರ್ಯ ನಡೆಸಿದ್ದು ಸ್ಥಳೀಯರು ಹಾಗೂ ಸುತ್ತಮುತ್ತಲಿನ ಗ್ರಾಮದ ಸಂಬಂಧಿಕರನ್ನ ಊಟಕ್ಕೆ ಆಹ್ವಾನಿಸಿದ್ದರೆ.

ಈ ಕಾರ್ಯಕ್ರಮದಲ್ಲಿ ಊಟ ಮಾಡಿದ  ನಾಲ್ಕೈದು ಜನರಿಗೆ ಗುರುವಾರ ಬೆಳಗಿನಿಂದಲೇ ಭೇದಿ ಜ್ಚರ, ಹೊಟ್ಟೆ ನೋವು ಕಾಣಿಸಿಕೊಂಡಿದೆ.ಬಳಿಕ ಅಸ್ವಸ್ಥರು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ನಂತರ ಶುಕ್ರವಾರ ಕಾರ್ಯಕ್ರಮದಲ್ಲಿ ಊಟ ಮಾಡಿದ 37 ಗ್ರಾಮಸ್ಥರಲ್ಲಿ ಅಸ್ವಸ್ಥೆ ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಬಾಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ತಕ್ಷಣವೇ ತುರ್ತಾಗಿ ಹಳೇ ಕುಂದೂರಿನಲ್ಲಿ ತಾತ್ಕಾಲಿಕ ಚಿಕಿತ್ಸಾ ಘಟಕವನ್ನು ತೆರೆದು ಅಸ್ವಸ್ಥರಿಗೆ ಚಿಕಿತ್ಸೆ ನೀಡಲಾಗಿದೆ.

ಈ ಪ್ರಕರಣಗಲ್ಲಿ 11 ಜನ ಹೆಚ್ಚಿನ ಚಿಕಿತ್ಸೆಗೆಗಾಗಿ ಬಾಗೂರು ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

ಇಂದು ( ಶನಿವಾರ) ದಂದು ಕೂಡ 2 ಅಸ್ವಸ್ಥ ಪ್ರಕರಣಗಳು ಬೆಳಕಿಗೆ ಬಂದಿದ್ದು,ಆದ್ದರಿಂದ ಹೊಸದುರ್ಗ ಸಂಚಾರಿ ಆರೋಗ್ಯ ಘಟಕವನ್ನು ಗ್ರಾಮದಲ್ಲಿ ಇರಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.

ಪ್ರಕರಣದ ಹಿನ್ನಲೆಯಲ್ಲಿ ಗ್ರಾಮದ 6 ಕುಡಿಯುವ ನೀರಿನ ಮಾದರಿಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ.ದೇವತಾ ಕಾರ್ಯದಲ್ಲಿ ಭಾಗವಹಿಸದವರಲ್ಲಿ ಮಾತ್ರ ಭೇದಿ, ಜ್ವರ, ಹೊಟ್ಟೆ ನೋವು ಕಂಡು ಬಂದಿದ್ದು , ವಿಷಯ ತಿಳಿದ ತಕ್ಷಣ ತಾಲ್ಲೂಕು ಆರೋಗ್ಯಾಧಿಕರಿಗಳಾದ ಆರ್.ಆರ್.ಟಿ ತಂಡ, ಜಿಲ್ಲಾ ಸರ್ವೇಕ್ಷಣಾ ಕಛೇರಿಯ ಆರ್.ಆರ್.ಟಿ ತಂಡಗಳು ಗ್ರಾಮಕ್ಕೆ ಭೇಟಿ ನೀಡಿ ಚಿಕಿತ್ಸೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿವೆ.

ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯ ತಂಡಗಳು ಗ್ರಾಮದ ಪ್ರತಿ ಮನೆ ಮನೆ ಭೇಟಿ ನೀಡಿ ಶುದ್ಧ ಕುಡಿಯುವ ನೀರು, ಬೇಸಿಗೆ ತಾಪಮಾನ ರಕ್ಷಣೆ, ಶುದ್ಧ ಆಹಾರ ಸೇವಿಸುವ ಬಗ್ಗೆ ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ನೀಡಿ ಅರಿವು ಮೂಡಿಸಿದ್ದಾರೆ.

ಬಾಗೂರು ಆರೋಗ್ಯಾಧಿಕಾರಿ ಡಾ.ಪರಶುರಾಮ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ವೀರೇಂದ್ರ ಪಾಟೀಲ್, ಜಿಲ್ಲಾ ಆರ್.ಆರ್.ಟಿ. ತಂಡದ ಆರೋಗ್ಯ ನಿರೀಕ್ಷಣಾಧಿಕಾರಿ ಎಮ್.ಹೆಚ್.ಮಂಜುನಾಥ, ವಿಶ್ವನಾಥ. ಆಶಾ ಕಾರ್ಯಕರ್ತೆಯರು ಸಂಚಾರಿ ಆರೋಗ್ಯ ತಪಾಸಣಾ ತಂಡ ಆರೋಗ್ಯ ಜಾಗೃತಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

About The Author

Leave a Reply

Your email address will not be published. Required fields are marked *