ನಗರಸಭೆ ನೌಕರರ ಬೇಡಿಕೆಗಳನ್ನು ಈಡೇರಿಸದಿದ್ದರೆ ಏಪ್ರಿಲ್ 27ಕ್ಕೆ ಅನಿರ್ಧಿಷ್ಟಾವಧಿ ಮುಷ್ಕರ ಮಾಡುತ್ತೇವೆಂದು ಮನವಿ
1 min read
ನಗರಸಭೆ ನೌಕರರ ಬೇಡಿಕೆಗಳನ್ನು ಈಡೇರಿಸದಿದ್ದರೆ ಏಪ್ರಿಲ್ 27ಕ್ಕೆ ಅನಿರ್ಧಿಷ್ಟಾವಧಿ ಮುಷ್ಕರ ಮಾಡುತ್ತೇವೆಂದು ಮನವಿ
ಚಿತ್ರದುರ್ಗ ಹೊಯ್ಸಳ ನ್ಯೂ ಸ್/
ಚಳ್ಳಕೆರೆ:
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರಸಭೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲವಾದರೆ ಏಪ್ರಿಲ್ 27 ರಂದು ಅನಿರ್ಧಿಷ್ಟ ಕಾಲ ಮುಷ್ಕರ ಮಾಡಲಾಗುತ್ತದೆ ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರ ಸಂಘದ ವತಿಯಿಂದ ನಗರಸಭೆ ಅಧ್ಯಕ್ಷೆಗೆ ಮನವಿ ಸಲ್ಲಿಸಿದರು.
ನಗರದ ನಗರಸಭೆ ಮುಂಭಾಗದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಪೌರಕಾರ್ಮಿಕರು ಬಲಗೈ ತೋಳಿಗೆ ಕಪ್ಪು ಬಟ್ಟೆ ಧರಿಸಿ ನಗರಸಭೆ ಅಧ್ಯಕ್ಷೆಗೆ ಮನವಿ ಸಲ್ಲಿಸಿ ಮಾತನಾಡಿದ ನೌಕರ ಸಂಘದ ಅಧ್ಯಕ್ಷ ಇ. ತಿಪ್ಪೇಸ್ವಾಮಿ ರಾಜ್ಯದಲ್ಲಿರುವ ಎಲ್ಲಾ ಮಹಾನಗರ ಪಾಲಿಕೆ/ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು.
ಪೌರ ವೃಂದದ ನೌಕರರ ಪ್ರಮುಖ ಬೇಡಿಕೆಗಳಾದ ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಿ ಕೆ.ಜಿ.ಐ.ಡಿ, ಜಿ.ಪಿ.ಎಫ್, ಜ್ಯೋತಿ ಸಂಜೀವಿನಿ, ಸೇರಿದಂತೆ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯವನ್ನು ಪೌರ ನೌಕರರಿಗೂ ಜಾರಿ ಮಾಡುಬೇಕು ಹಾಗೂ ಸುಮಾರು 25-30 ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೀರು ಸರಬರಾಜು ಸಿಬ್ಬಂದಿಗಳು, ಲೋಡರ್ ಗುತ್ತಿಗೆ ಲೆಕ್ಕಿಗರು, ಕ್ಲೀನರ್ಸ್ ಪೌರಕಾರ್ಮಿಕರು, ಸೂಪರ್ ವೈಸರ್, ಕಂಪ್ಯೂಟರ್ ಆಪರೇಟರ್, ಜ್ಯೂನಿಯರ್ ಪ್ರೋಗ್ರಾಮರ್, ಇನ್ನಿತರೆ ಗುತ್ತಿಗೆ/ಹೊರಗುತ್ತಿಗೆ ಮೂಲಕ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ನೇರಪಾವತಿ ವೇತನ ಮಾಡುವುದು.ಹುದ್ದೆ ಖಾಯಂ ಮಾಡಿ,
ಕಾನೂನು ಬದ್ಧ ಬೇಡಿಕೆಗಳನ್ನು ಈಡೇರಿಸದೇ ಒದರೆ ನಗರ ಸ್ಥಳೀಯ ಸಂಸ್ಥೆಗಳ ದೈನಂದಿನ ಕಚೇರಿ ಕೆಲಸಗಳನ್ನು ಹಾಗೂ ಸ್ವಚ್ಛತೆ ಕೆಲಸವನ್ನು, ನೀರು ಸರಬರಾಜು ಮತ್ತು ಬೀದಿ ದೀಪ ನಿರ್ವಹಣೆಯನ್ನು ಸ್ಥಗಿತಗೊಳಿಸಿ ಅನಿರ್ಧಿಷ್ಟಕಾಲ ಮುಷ್ಕರ ಮಾಡಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಎಲ್ಲಾ ನಗರಸಭೆ ನೌಕರರು ಪೌರಕಾರ್ಮಿಕರು ಉಪಸ್ಥಿತರಿದ್ದರು.