ವಾಲ್ಮೀಕಿ ವಿಗ್ರಹ ಧ್ವಂಸಗೊಳಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ: ವಾಲ್ಮೀಕಿ ಯುವಕ ಸಂಘ
1 min readಚಳ್ಳಕೆರೆ: ತಾಲ್ಲೂಕಿನ ನನ್ನಿವಾಳ ಗ್ರಾಮದ ವಾಲ್ಮೀಕಿ ವಿಗ್ರಹವನ್ನು ಭಾನುವಾರ ರಾತ್ರಿ ಕಿಡಿಗೇಡಿಗಳು ದ್ವಂಸಗೊಳಿಸಿದ್ದಾರೆ. ಅವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ಕೊಡಿಸಬೇಕೆಂದು ಶ್ರೀವಾಲ್ಮೀಕಿ ಯುವ ಸಂಘ ಒತ್ತಾಯಿಸಿದೆ.
ಮಂಗಳವಾರ ನಗರದ ವಾಲ್ಮೀಕಿ ವೃತ್ತದಿಂದ ಮೆರವಣಿಗೆ ಹೊರಟ ವಾಲ್ಮೀಕಿ ಯುವಕ ಸಂಘದ ಪದಾಧಿಕಾರಿಗಳು ತಾಲ್ಲೂಕು ಕಚೇರಿ, ಪೊಲೀಸ್ ಠಾಣೆಗೆ ತೆರಳಿ ಮನವಿ ನೀಡಿದರು.
ಈ ಸಂದರ್ಭಗಳಲ್ಲಿ ಮಾತನಾಡಿದ ಯುವ ಘಟಕದ ಮುಖಂಡ ಜೆ.ಬಸವರಾಜು, ಈ ದೇಶಕ್ಕೆ ರಾಮಾಯಣದಂತಹ ಮಹಾನ್ ಗ್ರಂಥವನ್ನು ನೀಡಿದ ವಾಲ್ಮೀಕಿ ವಿಗ್ರಹವನ್ನು ಯಾರೋ ದುಷ್ಕರ್ಮಿಗಳು ದುರುದ್ದೇಶದಿಂದ ದ್ವಂಸಗೊಳಿಸಿದ್ದು ಅವರನ್ನು ಕೂಡಲೇ ಬಂಧಿಸಿ ಅವರಿಗೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಒತ್ತಾಯಿಸಿದರು.