March 29, 2024

Chitradurga hoysala

Kannada news portal

ನಾಳೆ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ: ಜೆ.ವೈಶಾಲಿ

1 min read

ಚಿತ್ರದುರ್ಗ,ಆ.18 ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2019-20ನೇ ಸಾಲಿಗೆ ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದಿಂದ ಆಯ್ಕೆಯಾದ 16 ದೈಹಿಕ ವಿಕಲಚೇತನ ಫಲಾನುಭವಿಗಳಿಗೆ ಆಗಸ್ಟ್ 19 ರಂದು ಬೆಳಿಗ್ಗೆ 11 ಗಂಟೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಬಾಲಭವನದ ಆವರಣದಲ್ಲಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರು ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ (ರೆಟ್ರೋಫಿಟ್‍ಮೆಂಟ್ ಸಹಿತ) ವಾಹನಗಳನ್ನು ವಿತರಿಸಲಿದ್ದಾರೆ.  2019-20ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಖೆ, ಬೆಂಗಳೂರು ಇವರ ವತಿಯಿಂದ ತೀವ್ರತರನಾದ ದೈಹಿಕ ವಿಕಲಚೇತನರಿಗೆ ಉಚಿತವಾಗಿ ವಿತರಿಸಲು ಚಿತ್ರದುರ್ಗ ಜಿಲ್ಲೆಗೆ 88 ಯಂತ್ರಚಾಲಿತ ದ್ವಿಚಕ್ರ (ರೆಟ್ರೋಫಿಟ್‍ಮೆಂಟ್ ಸಹಿತ) ವಾಹನಗಳ ಭೌತಿಕ ಗುರಿಯನ್ನು ನಿಗಧಿಪಡಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *