ಹಿರಿಯೂರು ಶಕ್ತಿ ಗಣಪತಿ ಪ್ರತಿಷ್ಠಾಪನೆ
1 min readಹಿರಿಯೂರು: ಹಿರಿಯೂರಿನ ಪ್ರಸಿದ್ಧ ಶಕ್ತಿ ಗಣಪತಿಯ 49 ನೇ ವರ್ಷದ ಪೂಜಾ ಕಾರ್ಯಕ್ರಮವನ್ನು ಈ ಬಾರಿ ಕೋವಿಡ್-19 ಹಿನ್ನೆಲೆಯಲ್ಲಿ ನಗರದ ಸತ್ಯ ನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಸರಳ ಹಾಗೂ ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀಮತಿ ಕೆ ಪೂರ್ಣಿಮಾ ಶ್ರೀನಿವಾಸ ರವರು ಕೋವಿಡ್-19 ನಿಂದ ಶೀಘ್ರ ಗುಣಮುಖರಾಗಿ ಜನ ಸೇವೆಗೆ ಮರಳಲಿ ಹಾಗೂ ತಾಲ್ಲೂಕಿನಲ್ಲಿ ಕೊರೋನ ನಿವಾರಣೆ ಆಗಲೆಂದು ಪ್ರಾರ್ಥಿಸಲಾಯಿತು. ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಸಿದ್ದನಾಯಕ, ಉಪಾಧ್ಯಕ್ಷ ಪ್ರಕಾಶ್ ಕುಮಾರ್, ಎಂ.ಎಸ್.ರಾಘವೇಂದ್ರ, ಎ.ರಾಘವೇಂದ್ರ, ಕೇಶವಮೂರ್ತಿ, ವೆಂಕಟೇಶ್, ನಿರಂಜನ್, ಉಮಾಶಂಕರ್, ಸತೀಶ್ ಕುಮಾರ್, ಬಸವರಾಜ, ನಾಗೇಶ್ ಮುಂತಾದವರು ಉಪಸ್ಥಿತರಿದ್ದರು.