April 19, 2024

Chitradurga hoysala

Kannada news portal

ಹಿರಿಯೂರು ವಾಣಿವಿಲಾಸ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಕೂಡಲೇ ಕ್ರಮ ವಹಿಸಬೇಕು: ವಾಟಾಳ್ ನಾಗರಾಜ್ ಒತ್ತಾಯ

1 min read

ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಸ್ಥಗಿತಗೊಂಡಿರುವ ಬೃಹತ್ ವಾಣಿ ವಿಲಾಸ ಸಕ್ಕರೆ ಕಾರ್ಖಾನೆಯನ್ನು ಪುನರ್ ಆರಂಭಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಜನಪರ ಹೋರಾಟಗಾರ ವಾಟಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ‌.

ಹಿರಿಯೂರು ನಗರಕ್ಕೆ ದಿಢೀರ ಭೇಟಿ ನೀಡಿದ್ದ ಹೋರಾಟಗಾರ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಅತಿ ಶೀಘ್ರದಲ್ಲಿ ಸಕ್ಕರೆ ಕಾರ್ಖಾನೆ ಪುನಾರಂಭ ಮಾಡಬೇಕು. ಏಕೆಂದರೆ ಭದ್ರಾ ನೀರು ವಾಣಿ ವಿಲಾಸ ಸಾಗರಕ್ಕೆ ಹರಿಯುತ್ತಿದ್ದು ರೈತರು ಕಬ್ಬು ಬೆಳೆಯಲು ಮುಂದಾಗುತ್ತಾರೆ. ಸಕ್ಕರೆ ಕಾರ್ಖಾನೆಯನ್ನು ಒಂದು ವೇಳೆ ಸರ್ಕಾರ ಪುನರ್ ಆರಂಭಿಸದಿದ್ದರೆ ರೈತರೊಂದಿಗೆ ಸೇರಿ ಉಗ್ರ ಹೋರಾಟ ಆರಂಭಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು.

About The Author

Leave a Reply

Your email address will not be published. Required fields are marked *