April 25, 2024

Chitradurga hoysala

Kannada news portal

ಸರ್ಕಾರಿ ನೌಕರರಿಗೆ ಸೌಲಭ್ಯಗಳನ್ನು ತುರ್ತಾಗಿ ಕಲ್ಪಸಿ : ಶ್ರೀಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

1 min read

ಜಿಲ್ಲೆಯ ಸರ್ಕಾರಿ ನೌಕರರಿಗೆ ಅಗತ್ಯವಿರುವ ಸೌಲಭ್ಯಗಳನ್ನು ತುರ್ತಾಗಿ ಕಲ್ಪಿಸಲು ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ತಿಳಿಸಿದರು.
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಷಡಾಕ್ಷರಿ ಅವರು ಭೋವಿ ಗುರುಪೀಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಸರ್ಕಾರಿ ನೌಕರರ ಅಭಿವೃದ್ಧಿಗೆ ಅಗತ್ಯವಿರುವ ಸೌಲಭ್ಯಗಳನ್ನು ವಿವಿಧ ಇಲಾಖೆಯಿಂದ ಮಂಜೂರುಮಾಡಲು ತಮ್ಮ ಸಹಕಾರ ಅಗತ್ಯವಾಗಿದೆ. ಹಾಗಾಗಿ ಸಮುದಾಯ ಭವನ ಸೇರಿದಂತೆ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ಅಗತ್ಯವಿದೆ. ಅದನ್ನು ಮಂಜೂರಾತಿಮಾಡಲು ತಾವು ಹೆಚ್ಚು ಶ್ರಮವಹಿಸಬೇಕೆಂದು ಹೇಳಿದರು.
ಚಿತ್ರದುರ್ಗ ಜಿಲ್ಲೆಯ ನೌಕರರಿಗೆ ಅಗತ್ಯವಿರುವ ಸೌಲಭ್ಯಗಳಿಗಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ವಿಶೇಷವಾಗಿ ಅನುದಾನಗಳನ್ನು ಬಿಡುಗಡೆಗೊಳಿಸುವ ಮೂಲಕ ಸಮುದಾಯ ಭವನ ಹಾಗೂ ಭೂಮಿ ಸೇರಿದಂತೆ ಎಲ್ಲಾ ಕಾರ್ಯಗಳನ್ನು ಕೈಗೊಳಲು ತಿಳಿಸಿದರು.
ರಾಜ್ಯ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಮಾತನಾಡಿ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಜಿಲ್ಲಾ ನೌಕರರ ಸಂಘಕ್ಕೆ ನೌಕರರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಲು ಶ್ರಮಿಸುತ್ತೇನೆ. ನೌಕರರ ಹಿತ ಕಾಯುವುದೇ ಸಂಘದ ಉದ್ದೇಶವಾಗಿರುವುದರಿಂದ ಅವರ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತೇನೆ. ನೌಕರರ ಸಮಸ್ಯೆಗಳಿಗೆ ಯಾವಾಗ ಬೇಕಾದರೂ ಯಾರೇ ಬಂದು ಕೇಳಿದರೂ ಮುಂದೆ ನಿಂತು ಕೆಲಸ ಮಾಡುತ್ತೇನೆಂದು ಹೇಳಿದರು.
ಜಿಲ್ಲಾಧ್ಯಕ್ಷ ಕೆ.ಮಂಜುನಾಥ ಮಾತನಾಡಿ, ನೌಕರರ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶದಿಂದ ಜಿಲ್ಲಾ ಸಂಘ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ನೌಕರರ ಹಿತಾದೃಷ್ಠಿಯಿಂದ ಜಿಲ್ಲೆಯಲ್ಲಿ ಏನೇನು ಆಗಬೇಕಾಗಿದೆಯೋ ಅಂತಹ ಕಾರ್ಯಗಳ ಪಟ್ಟಿಯನ್ನು ಮಾಡಲಾಗಿದೆ. ಆದ್ಯತೆ ಮೇರೆಗೆ ಒಂದೊಂದೇ ವಿಚಾರವನ್ನು ಕೈಗೆತ್ತಿಕೊಂಡು ಪರಿಹರಿಸುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದರು.
ಭೋವಿ ಗುರುಪೀಠಕ್ಕೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಭೇಟಿ ನೀಡಿದ ಸಂದರ್ಭದಲ್ಲಿ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಜಿ ಹಾಗೂ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ ಅವರಿಂದ ಅಶೀರ್ವಾದ ಪಡೆದರು.
ಭೋವಿ ಗುರುಪೀಠದ ಸಿಇಓ ಗೌನಹಳ್ಳಿ ಗೋವಿಂದಪ್ಪ, ಬಿಇಒ ವೆಂಕಟೇಶಪ್ಪ, ನೌಕರರ ಸಂಘದ ನಿರ್ದೇಶಕರಾದ ತಿಮ್ಮಾರೆಡ್ಡಿ ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *