April 18, 2024

Chitradurga hoysala

Kannada news portal

ಗ್ರಾಮ ಪಂಚಾಯತಿ ಚುನಾವಣೆಗೆ ಬಿಜೆಪಿ ಪಕ್ಷವನ್ನು ಸಂಘಟಿಸಿ.

1 min read

ಚಳ್ಳಕೆರೆ: ಭಾರತೀಯ ಜನತಾ ಪಾರ್ಟಿ ನಾಯಕನಹಟ್ಟಿ ಮಂಡಲ ವತಿಯಿಂದ ಕಾಲುವೇಹಳ್ಳಿ ದೊಡ್ಡ ಉಳ್ಳಾರ್ತಿ, ಮೈಲನಹಳ್ಳಿ, ರೇಣುಕಾಪುರ, ಓಬಳಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಮಾಡಲಾಯಿತು. ಶೀಘ್ರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಇರುವುದರಿಂದ ನಾವು ಹೇಗೆ ತಯಾರಿ ಮಾಡಿಕೊಳ್ಳಬೇಕು ಮತ್ತು ಕಾರ್ಯಕರ್ತರ ಕುಂದು ಕೊರತೆಗಳನ್ನು ಆಲಿಸಿದರು. ಗ್ರಾಮಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಪಟ್ಟಿ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಾಯಕನಹಟ್ಟಿ ಮಂಡಲ ಅಧ್ಯಕ್ಷ ಶ್ರೀರಾಮ್ ರೆಡ್ಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ ಪಿ ಜಯಪಾಲಯ್ಯ, ಸಚಿವರ ಆಪ್ತ ಸಹಾಯಕ ಪಾಪೇಶ್ ನಾಯಕ್ ಮತ್ತು ಪಾಲಯ್ಯ, ಬಿಜೆಪಿ ಎಸ್ ಟಿ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ನಾಯಕ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಂಜುನಾಥ್ ಟಿ, ಹಿರೇಹಳ್ಳಿ ತಾಲ್ಲೂಕು ಪಂಚಾಯತಿ ಸದಸ್ಯರಾದ ಸುನಂದಮ್ಮ, ಮಂಡಲ ಪ್ರಧಾನ ಕಾರ್ಯದರ್ಶಿ ಗೋವಿಂದಪ್ಪ, ಎಪಿಎಂಸಿ ಉಪಾಧ್ಯಕ್ಷರಾದ ಮೋಹನ್, ಮಂಡಲ ಕಾರ್ಯದರ್ಶಿ ಪ್ರಕಾಶ್ ರೆಡ್ಡಿ, ಬಿಜೆಪಿ ಮುಖಂಡರಾದ ಗೋವಿಂದಪ್ಪ, ತಿಮ್ಮಣ್ಣ, ಕೃಷ್ಣಮೂರ್ತಿ ಎಂ ಟಿ, ಕಾಲುವೇಹಳ್ಳಿ ರಂಗಸ್ವಾಮಿ, ತಿಪ್ಪೇಸ್ವಾಮಿ, ಚಂದ್ರಣ್ಣ, ಮುಂತಾದವರು ಇದ್ದರು,

About The Author

Leave a Reply

Your email address will not be published. Required fields are marked *