ಜಿಲ್ಲೆಯ ಎಲ್ಲಾ ಕೆರೆ ಕಟ್ಟೆಗಳು ತುಂಬಿರುವುದು ಹರ್ಷ ತಂದಿದೆ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ
1 min readಚಿತ್ರದುರ್ಗ: ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಎಲ್ಲಾ ಕೆರೆ ಕಟ್ಟೆಗಳು ತುಂಬಿರುವುದು ಸಂತೋಷ ತಂದಿದೆ ಶಾಸಕ.ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.
ನಗರದ ಮಠದ ಕುರುಬರಹಟ್ಟಿ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಕಳೆದ 10 ವರ್ಷಗಳಿಂದ ಹೆಚ್ಚು ಮಳೆಯಾಗದೆ ಅನೇಕ ಬೋರ್ ವೆಲ್ ಗಳು ನಿಂತಿದ್ದವು ಈಗ ನೂರಾರು ಬೊರವೆಲ್ ಗಳಲ್ಲಿ ನೀರು ಬರುತ್ತಿದೆ. ನಾನು ಬರಗಾಲದಲ್ಲಿ ಕೊರೆಸಿ ಬಿಟ್ಟ ಬೊರವೆಲ್ ಗಳಲ್ಲಿ ನೀರು ಬರುತ್ತಿದೆ. ನೀರಿನ ಸಮಸ್ಯೆ ಆಗಲಾರದಷ್ಟು ಮಳೆ ಬಂದಿದೆ ಎಂದರು. ಕಾರ್ಯಕ್ರಮದಲ್ಲಿ ಮರುಘಾಮಠದ ಶಿವಮೂರ್ತಿ ಮುರುಘಾಶರಣರು, ಜಿಲ್ಲಾ ಪಂಚಾಯತ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬದ್ರಿನಾಥ್, ಜಿಲ್ಲಾ ಪಂಚಾಯತ ಸ್ಥಾಯಿ ಸಮಿತಿ ಅಧ್ಯಕ್ಷ ನರಸಿಂಹರಾಜು, ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರೇಖಾ, ಮಂಜುನಾಥ್, ನಗರಸಭೆ ಪೌರಯುಕ್ತ ಹನುಮಂತರಾಜು, ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತರು ಸ್ಥಳೀಯ ಮುಖಂಡರು ಹಾಜರಿದ್ದರು.