May 3, 2024

Chitradurga hoysala

Kannada news portal

ಮಾದಾರ ಚನ್ನಯ್ಯ ಸ್ವಾಮೀಜಿಗೆ ಕೋವಿಡ್ ಸೋಂಕು ದೃಢ

1 min read

ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರಿಗೆ ಕೊರೊನಾ ಸೋಂಕು ದೃಡಪಟ್ಟಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊಲಂಬಿಯಾ ಏಶಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಶ್ರೀಶಿವಶರಣ ಮಾದಾರ ಚನ್ನಯ್ಯ ಟ್ರಸ್ಟ್ ನ ಕೋಶಾಧ್ಯಕ್ಷ ಬಿ.ಎನ್.ಚಂದ್ರಪ್ಪ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಸೋಂಕು ದೃಢಪಟ್ಟ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸ್ತುತ ಸ್ವಾಮೀಜಿಯವರ ಆರೋಗ್ಯ ಸ್ಥಿರವಾಗಿದ್ದು, ಸುಧಾರಿಸುತ್ತಿದೆ ಎಂದು ತಿಳಿಸಿದ್ದಾರೆ.
ಒಳ ಮೀಸಲು ಕುರಿತ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯದ ನಾನಾ ಮುಖಂಡರ ಜತೆ ಸಮಾಲೋಚನೆ ನಡೆಸಲು ಪ್ರವಾಸದಲ್ಲಿದ್ದ ಸ್ವಾಮೀಜಿ ಯವರಿಗೆ ಸೋಂಕು ತಗುಲಿದೆ. ಆಸ್ಪತ್ರೆಯಿಂದ ವಾಪಾಸಾದ ನಂತರ ಈ ಕುರಿತ ಪ್ರವಾಸ, ಸಮಾಲೋಚನೆ ಮುಂದುವರಿಸ ಲಿದ್ದಾರೆ ಎಂದು ಹೇಳಿದ್ದಾರೆ.
ನಾಲ್ಕೈದು ದಿನಗಳಲ್ಲಿ ಸ್ವಾಮೀಜಿಯವರು ಗುರುಪೀಠಕ್ಕೆ ವಾಪಾಸಾಗಲಿದ್ದಾರೆ. ಗುರುಪೀಠದ ಭಕ್ತರು, ಹಿತೈಷಿಗಳು ಆತಂಕಪಡಬೇಕಾದ ಅಗತ್ಯ ಇಲ್ಲ ಎಂದು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *