May 17, 2025

Chitradurga hoysala

Kannada news portal

ಮನೀಷಾ ಪ್ರಕರಣವನ್ನು ಕೂಡಲೇ ಸಿಬಿಐಗೆ ವಹಿಸಿ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲು ಒತ್ತಾಯ .

1 min read

ಉತ್ತರ ಪ್ರದೇಶ ರಾಜ್ಯದಲ್ಲಿ ಮನೀಷಾ ವಾಲ್ಮೀಕಿ ಇವರ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿ.ಬಿ.ಐ ಗೆ ವಹಿಸಿ ಆರೋಪಿಗಳಿಗೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಚಿತ್ರನಾಯಕ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. 
ರಾಮರಾಜ್ಯವೆಂದು ಹೆಸರಾದ ಉತ್ತರಪ್ರದೇಶದಲ್ಲಿ ನಾಲಿಗೆ ಕತ್ತರಿಸಿ ಅತ್ಯಂತ ಕ್ರೂರವಾಗಿ ಕೊಂದಿರುವ ಘಟನೆ ಇಡೀ ಮನುಕುಲವನ್ನು ತಲೆ ತಗ್ಗಿಸುವಂತೆ ಮಾಡಿದೆ. ಇಂತಹ ಕ್ರೂರಿಗಳು ನಮ್ಮ ತಾಯಿಯೂ ಸಹ ಹೆಣ್ಣು ಮಗಳು ಎಂಬುದನ್ನು ಮರೆತು ಇಂತಹ ಕೃತ್ಯಗಳನ್ನು ನಡೆಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಇಂತಹ ಪ್ರಕರಣಗಳು ಅತೀ ಹೆಚ್ಚಾಗಿ ನಡೆಯುತ್ತಿರುವುದು ಶೋಚನೀಯ ಸಂಗತಿ. ಉತ್ತರ ಪ್ರದೇಶದ ಪೊಲೀಸ್ ಇಲಾಖೆ ಜಿಲ್ಲಾಡಳಿತ ಮತ್ತು ಸರ್ಕಾರದ ನಿರ್ಲಕ್ಷೆ ಖಂಡನೀಯವಾಗಿದೆ. ಹಾಗೂ ಇಂದಿನ ಕಾಲಮಾನದಲ್ಲಿ ರಾಷ್ಟ್ರೀಯ ಪಕ್ಷಗಳ ಮೇಲೆ ಭರವಸೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶದ ವಾಲ್ಮೀಕಿ ಸಮಾಜ ಒಕ್ಕೋರಲಿನಿಂದ ಖಂಡಿಸುತ್ತೇವೆ. ಈ ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸಿ ಕಾನೂನು ರೀತಿ ಕ್ರಮ ಕೈಗೊಂಡು ಆರೋಪಿಗಳನ್ನ ಗಲ್ಲು ಶಿಕ್ಷೆಗೆ ಒಳಪಡಿಸಬೇಕೆಂದು ಚಿತ್ರದುರ್ಗದ ಅಪರ ಜಿಲ್ಲಾಧಿಕಾರಿ ಸಂಗಪ್ಪ ರವರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. 
ಈ ಸಂದರ್ಭದಲ್ಲಿ ಚಿತ್ರನಾಯಕ ವೇದಿಕೆ ಅಧ್ಯಕ್ಷ ಪ್ರಶಾಂತ್‌ಕುಮಾರ್, ಅಶೋಕ್‌ಬೆಳಗಟ್ಟ ವಕೀಲರು, ಬಿಚ್ಚುಗತ್ತಿ ಓಬಳೇಶ್, ತಿಪ್ಪೇಸ್ವಾಮಿ, ಗೋಪಾಲಸ್ವಾಮಿನಾಯಕ, ಮಲ್ಲಿಕಾರ್ಜುನ್, ಸತ್ಯಣ್ಣ, ಮಹಂತೇಶ್, ತಿಪ್ಪೇಸ್ವಾಮಿ ಇನ್ನು ಇತರೆ ಸಮಾಜದ ಮುಖಂಡರು ಭಾಗವಹಿಸಿದ್ದರು.

About The Author

Leave a Reply

Your email address will not be published. Required fields are marked *