ಶಿರಾ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಸಮರ್ಥರು :ಸುರ್ಜೇವಾಲ
1 min readಬೆಂಗಳೂರು: ಶಿರಾ ಉಪಚುನಾವಣೆಯಲ್ಲಿ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರನ್ನು ಕಣಕ್ಕಿಳಿಸುವುದಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲವಿರೋಧ ವ್ಯಕ್ತಪಡಿಸಿದ್ದರು ಎನ್ನುವುದಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವಿನ ಸಂಭಾಷಣೆ ವೈರಲ್ ಆಗಿತ್ತು. ಆದರೆ ‘ಇದು ಶುದ್ಧ ಸುಳ್ಳು’ ಎಂದು ಸುರ್ಜೇವಾಲ ಹೇಳಿದ್ದಾರೆ.
ಈ ಸಂಬಂಧ ಕನ್ನಡದಲ್ಲೇ ಟ್ಟೀಟ್ ಮಾಡಿರುವ ಅವರು, “ಶಿರಾ ಉಪಚುನಾವಣೆಗೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುದ್ದಿ ಶುದ್ಧ ಸುಳ್ಳು. ಎಐಸಿಸಿ ಮತ್ತು ರಾಜ್ಯದ ಎಲ್ಲಾ ನಾಯಕರು ಒಮ್ಮತದಿಂದ ಹಿರಿಯ, ಸಮರ್ಥ ನಾಯಕ ಟಿಬಿ ಜಯಚಂದ್ರ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಿದ್ದಾರೆ,” ಎಂದು ವಿವರಿಸಿದ್ದಾರೆ.
ಮಾಧ್ಯಮ ಸ್ನೇಹಿತರು ಬಿಜೆಪಿಯ ಷಡ್ಯಂತ್ರಕ್ಕೆ ಸಿಲುಕದೆ ನಮ್ಮ ಅಭಿಪ್ರಾಯಕ್ಕೆ ಆದ್ಯತೆ ನೀಡಬೇಕು ಎಂದು ಬಯಸುತ್ತೇವೆ ಎಂಬುದಾಗಿಯೂ ಅವರು ಹೇಳಿದ್ದಾರೆ.