April 26, 2024

Chitradurga hoysala

Kannada news portal

ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ: ಮತ ಚಲಾಯಿಸಲು ಪರ್ಯಾಯ ದಾಖಲೆ

1 min read

ಚಿತ್ರದುರ್ಗ, ಅಕ್ಟೋಬರ್15:
 ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅಕ್ಟೋಬರ್28 ರಂದು ಮತದಾನ ನಡೆಯಲಿದ್ದು, ಚುನಾವಣಾ ಗುರುತಿನ ಚೀಟಿ ಇಲ್ಲದೆ ಇದ್ದವರು ಪರ್ಯಾಯ ದಾಖಲೆ ಬಳಸಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.
 ಮತದಾರರು ಮತ ಚಲಾಯಿಸಲು ಮತಗಟ್ಟೆಗಳಿಗೆ ಹೋದ ಸಂದರ್ಭದಲ್ಲಿ ಅವರು ಹೊಂದಿರುವ ಮತದಾರರ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕು. ಒಂದು ವೇಳೆ ಅದನ್ನು ಹಾಜರುಪಡಿಸಲು ಸಾಧ್ಯವಿಲ್ಲದಿದ್ದಲ್ಲಿ ಈ ಕೆಳಕಂಡ ಯಾವುದಾದರೂ ಒಂದು ಪರ್ಯಾಯ ದಾಖಲಾತಿಯನ್ನು ಮತದಾರರನ್ನು ಗುರುತಿಸುವುದಕ್ಕಾಗಿ ಹಾಜರುಪಡಿಸಬಹುದಾಗಿದೆ.
ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಪಾನ್ ಕಾರ್ಡ್, ಭಾರತೀಯ ಪಾಸ್‍ಫೋರ್ಟ್, ರಾಜ್ಯ, ಕೇಂದ್ರ ಸರ್ಕಾರ, ಸಾರ್ವಜನಿಕ ವಲಯ, ಸ್ಥಳೀಯ ಸಂಸ್ಥೆಗಳು ಅಥವಾ ಇತರೆ ಖಾಸಗಿ ಕೈಗಾರಿಕೆ ಸಂಸ್ಥೆಗಳು ತಮ್ಮ ನೌಕರರಿಗೆ ನೀಡಿರುವ ಸೇವಾ ಗುರುತಿನ ಚೀಟಿ, ಸಂಸದರು, ವಿಧಾನಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯರುಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿಗಳು, ಶಿಕ್ಷಕರು, ಪದವೀಧರರ ಕ್ಷೇತ್ರ ವ್ಯಾಪ್ತಿಯಲ್ಲಿ ಶೈಕ್ಷಣಿಕ ಸಂಸ್ಥೆಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ನೀಡಿರುವ ಸೇವಾ ಗುರುತಿನ ಚೀಟಿ, ವಿಶ್ವವಿದ್ಯಾಲಯದಿಂದ ನೀಡಿರುವ ಪದವಿ, ಡಿಪ್ಲೊಮಾದ ಮೂಲಕ ಪ್ರಮಾಣಪತ್ರಗಳು, ಸಕ್ಷಮ ಪ್ರಾಧಿಕಾರದಿಂದ ನೀಡಲಾಗಿರುವ ಅಂಗವಿಕಲ ದೃಢೀಕರಣ ಪತ್ರದ ಮೂಲ ಪ್ರತಿಗಳನ್ನು ಮತದಾನದ ವೇಳೆ ಪರ್ಯಾಯ ದಾಖಲೆಗಳನ್ನಾಗಿ ಬಳಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *