May 4, 2024

Chitradurga hoysala

Kannada news portal

ಸರ್ಕಾರಿ ನೌಕರರು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದು ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಡಿಸಿ ಕವಿತಾ ಎಸ್ ಮನ್ನಿಕೇರಿ

1 min read

ಚಿತ್ರದುರ್ಗ, ಅಕ್ಟೋಬರ್17:
ವಿಧಾನ ಪರಿಷತ್‍ನ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಭಾರತ ಚುನಾವಣಾ ಆಯೋಗವು ಸೆಪ್ಟೆಂಬರ್ 29 ರಂದು ವೇಳಾಪಟ್ಟಿಯನ್ನು ಹೊರಡಿಸಿದ ದಿನದಿಂದ ಮಾದರಿ ನೀತಿ ಸಂಹಿತೆ ಜಾರಿಯಲಿದ್ದು, ಸರ್ಕಾರಿ ನೌಕರರು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ.
ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2020ರ ಸಂಬಂಧ ಜಿಲ್ಲೆಯಲ್ಲಿ ಕೆಲವು ಅಧಿಕಾರಿ,ಸಿಬ್ಬಂದಿಯವರು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ಬಗ್ಗೆ ದೂರುಗಳು ಸ್ವೀಕೃತವಾಗುತ್ತಿವೆ.
 ಅಧಿಕಾರಿ, ಸಿಬ್ಬಂದಿಯವರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದು, ಕಂಡು ಬಂದಲ್ಲಿ ಹಾಗೂ ಒಂದು ವೇಳೆ ಯಾವುದೇ ಅಧಿಕಾರಿ, ಸಿಬ್ಬಂದಿಯ ವಿರುದ್ಧ ದೂರುಗಳು ಸ್ವೀಕೃತವಾದಲ್ಲಿ ಪ್ರಜಾ ಪ್ರಾತಿನಿಧ್ಯ ಕಾಯ್ದೆಯಡಿ ಶಿಸ್ತು ಕ್ರಮಕೈಗೊಂಡು ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *