April 20, 2024

Chitradurga hoysala

Kannada news portal

ಕನ್ನಡ ರಕ್ಷಣೆ ಪ್ರತಿಯೊಬ್ಬರ ಹೊಣೆ: ಶಾಸಕ ಟಿ.ರಘುಮೂರ್ತಿ

1 min read

ಚಳ್ಳಕೆರೆ- ಕನ್ನಡ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಅವರು, ನಗರದ ವಾಲ್ಮೀಕಿ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯ ಮೇಲೆ ಹಲವಾರು ಭಾಷಿಕರು ದಬ್ಬಾಳಿ ಮಾಡುತ್ತಿದ್ದಾರೆ. ಇದಕ್ಕೆ ಪುಷ್ಟಿನೀಡುವಂತೆ ಸರ್ಕಾರವೂ ಪ್ರಾಧಿಕಾರಗಳ ರಚನೆ ಮಾಡುವ ಮೂಲಕ ಉತ್ತೇಜನ ನೀಡುತ್ತಿರುವುದು ಬೇಸರದ ಸಂಗತಿ ಎಂದರು.
ಕರವೇ ಜಿಲ್ಲಾಧ್ಯಕ್ಷ ರಮೇಶ್ ಮಾತನಾಡಿ, ಕನ್ನಡವನ್ನು ಉಳಿಸುವ ನಿಟ್ಟಿನಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ್ರು ಸೇರಿದಂತೆ ರಾಜ್ಯಾದ್ಯಂತ ಹೋರಾಟಗಳ ಮೂಲಕ ಕನ್ನಡ ಭಾಷೆ ಮತ್ತು ಭಾಷಿಕರ ರಕ್ಷಣೆಗೆ ಪಣತೊಟ್ಟು ನಿಂತಿದೆ. ಕನ್ನಡಿಗರಿಗೆ ಎಂದಿಗೂ ಅನ್ಯಾಯವಾಗುವುದನ್ನು ಸಹಿಸಲ್ಲವೆಂದರು. ತಾಲ್ಲೂಕು ಅಧ್ಯಕ್ಷ ಟಿ.ಜೆ.ವೆಂಕಟೇಶ, ನಗರಸಭಾ ಸದಸ್ಯರಾದ ರಮೇಶ್ ಗೌಡ, ವೀರಭದ್ರಪ್ಪ, ಚಳ್ಳಕೆರೆಯಪ್ಪ, ಸುಜಾತ, ವೀರೇಶ್ ಸೇರಿದಂತೆ ಹಲವಾರು ಕನ್ನಡಾಭಿಮಾನಿಗಳು ಭಾಗವಹಿಸಿದ್ದರು.

About The Author

Leave a Reply

Your email address will not be published. Required fields are marked *