April 25, 2024

Chitradurga hoysala

Kannada news portal

ಹೊಸ ವೈರಸ್ ತಡೆಗೆ ಸಿಎಂ ಕರ್ಫೂ ತಂತ್ರದ ಮೊರೆ.

1 min read

ಬೆಂಗಳೂರು: ಹೊಸ ಬಗೆಯ ಕೊರೊನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಬುಧವಾರದಿಂದ ಜನವರಿ 2ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ.

ಬುಧವಾರ ಕೋವಿಡ್ ನಿಯಂತ್ರಣ ಕಾರ್ಯಪಡೆ, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜತೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಬುಧವಾರ ರಾತ್ರಿಯಿಂದಲೇ ಈ ಕ್ರಮ ಜಾರಿಗೆ ಬರಲಿದೆ. ಸಂಪೂರ್ಣವಾಗಿ ರಾಜ್ಯಕ್ಕೆ ಈ ಆದೇಶ ಅನ್ವಯವಾಗಲಿದೆ ಎಂದರು.

ವಿದೇಶಗಳಿಂದ ರಾಜ್ಯಕ್ಕೆ ಬರುವವರು ಆರ್ ಟಿ-ಪಿಸಿಆರ್ ವಿಧಾನದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನೆಗೆಟಿವ್ ವರದಿ ಹೊಂದಿರಬೇಕು. ಹೊರಗೆ ಓಡಾಡುವಾಗ 72 ಗಂಟೆಗಳ ಅವಧಿಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಎಂದರು.

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

About The Author

Leave a Reply

Your email address will not be published. Required fields are marked *