April 19, 2024

Chitradurga hoysala

Kannada news portal

ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಆತ್ಮಹತ್ಯೆ , ರೈಲಿಗೆ ತಲೆ ಕೊಟ್ಟ ಸಾವಿಗೆ ಶರಣು.

1 min read

ಬೆಂಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಅವರು ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜಕೀಯ ವಲಯದಲ್ಲಿ ಆಘಾತ ಮನೆ ಮಾಡಿದೆ.

ಎಸ್.ಎಲ್. ಧರ್ಮೇಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ,ಡಿ.ಕೆ.ಶಿವಕುಮಾರ್,ಸಿದ್ದರಾಮಯ್ಯ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಎಸ್.ಎಲ್. ಧರ್ಮೇಗೌಡ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರು ತೀವ್ರ. ಸಂತಾಪ ವ್ಯಕ್ತಪಡಿಸಿದ್ದಾರೆ. ಧರ್ಮೇಗೌಡ ಅವರ ಅಕಾಲಿಕ ನಿಧನ ಅತ್ಯಂತ ದುರದೃಷ್ಟಕರ ಹಾಗೂ ತೀವ್ರ ಆಘಾತ ತಂದಿದೆ. ವಿಧಾನ ಪರಿಷತ್ ಸದಸ್ಯರಾಗಿ, ಉಪ ಸಭಾಪತಿಯಾಗಿ ಅವರ ಕಾರ್ಯ ವೈಖರಿ ಅತ್ಯುತ್ತಮವಾಗಿತ್ತು ಎಂದು ಮುಖ್ಯಮಂತ್ರಿಗಳು ನೆನೆದಿದ್ದಾರೆ.. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಈ ಆಘಾತವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ

About The Author

Leave a Reply

Your email address will not be published. Required fields are marked *