May 17, 2024

Chitradurga hoysala

Kannada news portal

ಬಾಯಿಗೆ ಬಂದಂತೆ ಮಾತನಾಡುವುದು ಸಿದ್ದರಾಮಯ್ಯ ನಿಲ್ಲಿಸಲಿ: ಸಚಿವ ಬಿ.ಶ್ರೀರಾಮುಲು

1 min read

ಚಿತ್ರದುರ್ಗ: ಸಿದ್ದರಾಮಯ್ಯನವರಿಗೆ ಅಧಿಕಾರ ಕಳೆದುಕೊಂಡು ಮತಿಭ್ರಮಣೆಯಾಗಿದ್ದು, ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ” ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಅನೈತಿಕ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಈ ರೀತಿ ಹೇಳುವ ಮೂಲಕ ಸಿದ್ದರಾಮಯ್ಯ ಮೇಷ್ಟ್ರಾಗಲು ಹೊರಟಿದ್ದಾರೆ, ಆದರೆ ನಮ್ಮನ್ನು ಟೀಕಿಸಲು ಅವರಿಗೆ ನೈತಿಕತೆ ಇರಬೇಕು” ಎಂದರು.

ಇನ್ನು “ಚುನಾವಣೆಯಲ್ಲಿ ಬೆಂಬಲ ನೀಡುವುದಾಗಿ ಹೇಳಿ ದೇವೇಗೌಡರನ್ನು ಸೋಲಿಸಿದಂತವರು ಸಿದ್ದರಾಮಯ್ಯ. ಕುಮಾರಸ್ವಾಮಿ ಅವರನ್ನು ಸಿಎಂ ಕುರ್ಚಿಯಿಂದ ಇಳಿಸಿದವರು ನೈತಿಕತೆ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ಕುಟುಕಿದರು.

About The Author

Leave a Reply

Your email address will not be published. Required fields are marked *