ಶಾಲಾ ವಾಹನ ಪಲ್ಟಿ 15 ಮಕ್ಕಳು ಗಾಯಗೊಂಡು ಆಸ್ಪತ್ರೆಗೆ ದಾಖಲು.
1 min readಮುಳಬಾಗಿಲು:ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾಗಿ 15 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸೀಗೇನಹಳ್ಳಿ ಗೇಟ್ ಬಳಿ ನಡೆದಿದೆ.
ಸೋಮವಾರ ಬೆಳ್ಳಿಗ್ಗೆ ಈ ಘಟನೆ ನಡೆದಿದ್ದು, ಮುಳಬಾಗಿಲು ಪಟ್ಟಣದ ಶ್ರೀಸಾಯಿ ಇಂಟರ್ನ್ಯಾಷನಲ್ ಶಾಲೆಯ ವಾಹನ ಪಲ್ಟಿಯಾಗಿದೆ. ಹೆಬ್ಬಣಿ, ಬೈರಕೂರು ಹಾಗೂ ನಂಗಲಿಯಿಂದ ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ವಾಹನದಲ್ಲಿ ಅದರ ಸಾಮರ್ಥ್ಯಕ್ಕೂ ಮೀರಿ ವಿದ್ಯಾರ್ಥಿಗಳನ್ನ ತುಂಬಿದ್ದೆ ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಗಾಯಗೊಂಡ 15 ಮಕ್ಕಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಕುಶಾಲ್ ಎಂಬ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ. ಉಳಿದವರನ್ನ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.