May 9, 2024

Chitradurga hoysala

Kannada news portal

ಉದ್ಯೋಗ ವಾರ್ತೆ:ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ.

1 min read

ಚಿತ್ರದುರ್ಗ,ಫೆಬ್ರವರಿ19: 
ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ನಗರ ಪುನರ್ವಸತಿ  ಕಾರ್ಯಕರ್ತರ ಹುದ್ದೆಗೆ 18 ರಿಂದ 45 ವರ್ಷದ ವಯೋಮಾನದ ಆರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 1 ಕೊನೆಯ ದಿನವಾಗಿದೆ.
ನಗರ ಪುನರ್ವಸತಿ  ಕಾರ್ಯಕರ್ತರ ಹುದ್ದೆಗೆ ಮಾಸಿಕ   ರೂ. 6000/-ಗಳ ಗೌರವಧನ ನೀಡಲಾಗುವುದು.  ಎಸ್‍ಎಸ್‍ಎಲ್‍ಸಿ ಉತ್ತೀರ್ಣ, ಅನುತ್ತೀರ್ಣರಾದ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಗಳನ್ನು ಆಯಾ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ  ಕಾರ್ಯಕರ್ತರನ್ನು ಸಂಪರ್ಕಿಸಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ತಾಲ್ಲೂಕಿನ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ  ಕಾರ್ಯಕರ್ತರಲ್ಲಿ ಸಲ್ಲಿಸಬಹುದಾಗಿದೆ.
ಗ್ರಾಮೀಣ ಪುನರ್ವಸತಿ  ಕಾರ್ಯಕರ್ತರ ಹುದ್ದೆಗೆ ಖಾಲಿ ಇರುವ ನಗರಸಭೆ ಮತ್ತು ಪಟ್ಟಣ ಪಂಚಾಯಿತಿ ವಿವರ ಇಂತಿವೆ: ಚಿತ್ರದುರ್ಗ ನಗರಸಭೆ-2(13 ರಿಂದ 24ನೇ ವಾರ್ಡ್‍ರವರಿಗೆ-1, ಹಾಗೂ 25 ರಿಂದ 35ನೇ ವಾರ್ಡ್‍ವರಿಗೆ-1), ಹಿರಿಯೂರು-2(1ರಿಂದ10ನೇ ವಾರ್ಡ್‍ವರಿಗೆ-1, ಹಾಗೂ 21 ರಿಂದ 31ನೇ ವಾರ್ಡ್‍ವರಿಗೆ-1), ಪುರಸಭೆ ಹೊಸದುರ್ಗ-1 ಹಾಗೂ ಹೊಳಲ್ಕೆರೆ ಪಟ್ಟಣ ಪಂಚಾಯಿತಿಯಲ್ಲಿ-1 ನಗರ ಪುನರ್ವಸತಿ  ಕಾರ್ಯಕರ್ತರ ಹುದ್ದೆ ಖಾಲಿ ಇವೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಚಿತ್ರದುರ್ಗ. ದೂರವಾಣಿ:08194-235284/86ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *