May 2, 2024

Chitradurga hoysala

Kannada news portal

ಬಳ್ಳಾರಿ ಜಿಲ್ಲೆಗೆ ಶ್ರೀರಾಮುಲು ಉಸ್ತುವಾರಿ ಆದರೆ ಓಕೆ:ಸಚಿವ ಆನಂದಸಿಂಗ್

1 min read

ಬಳ್ಳಾರಿ: ಫೆ:24: ಸಚಿವ ಬಿ. ಶ್ರೀರಾಮುಲು ಅವರು ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಂತ್ರಿಯಾದರೆ ನಾನು ಸ್ವಾಗತ ಮಾಡುವೆ. ಒಂದು ವೇಳೆ ಬೇರೆ ಯಾರೇ ಉಸ್ತುವಾರಿ ಬಂದರೆ ನಾನು ಒಪ್ಪೋದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್‌ ಹೇಳಿದ್ದಾರೆ. 

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀರಾಮುಲು ಜಿಲ್ಲಾ ಉಸ್ತುವಾರಿಯಾಗಬೇಕು ಎಂದು ಹೇಳಿಕೆ ನೀಡಿದ್ದ ಶಾಸಕ ಜಿ. ಸೋಮಶೇಖರ ರೆಡ್ಡಿ ಅವರಿಗೆ ಪರೋಕ್ಷವಾಗಿ ಟಾಂಗ್‌ ನೀಡಿದರು. ಬಳ್ಳಾರಿ ಜಿಲ್ಲೆಗೆ ಶ್ರೀರಾಮುಲು ಮಂತ್ರಿಯಾಗಿರಬೇಕು. ಇಲ್ಲವೇ ನಾನೇ ಮಂತ್ರಿಯಾಗಿ ಮುಂದುವರಿಯಬೇಕು. ಬೇರೆಯವರು ಮಂತ್ರಿಯಾಗಲು ನಾನು ಒಪ್ಪಲು ಸಾಧ್ಯವೇ ಇಲ್ಲ. ನಾನು ಅಥವಾ ಶ್ರೀರಾಮುಲು ಬಿಟ್ಟರೆ ಬೇರೆಯವರಿಗೆ ಈ ಜಿಲ್ಲೆ ಬಗ್ಗೆ ನಾಲೇಡ್ಜ್ ಇರೋದಿಲ್ಲ. ಹೀಗಾಗಿ ನಾವಿಬ್ಬರಲ್ಲಿ ಯಾರಾದರೂ ನನ್ನ ತಕರಾರು ಇಲ್ಲ ಎಂದರು.

ಶ್ರೀರಾಮುಲು ಅವರು ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಬೇಕು ಎಂದು ಶಾಸಕ ಜಿ. ಸೋಮಶೇಖರ ರೆಡ್ಡಿ ಅವರು ಪೂರ್ಣ ಮನಸ್ಸಿನಿಂದಲೇ ಹೇಳಿದ್ದಾರೆಯೇ? ಹಾಗಿದ್ದರೆ ಖಂಡಿತ ನಾನು ಶ್ರೀರಾಮುಲುಗೆ ಬಿಟ್ಟುಕೊಡಲು ಸಿದ್ಧನಿದ್ದೇನೆ. ಅಷ್ಟೇ ಅಲ್ಲ ಉಸ್ತುವಾರಿ ಸಚಿವರಾಗಲಿ ಎಂದು ನಾನೇ ಸ್ವಾಗತ ಮಾಡುತ್ತೇನೆ ಎಂದು ಶಾಸಕ ರೆಡ್ಡಿ ಈ ಹಿಂದೆ ನೀಡಿದ್ದ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಸಚಿವರನ್ನು ಮಾತ್ರ ಉಸ್ತುವಾರಿ ಮಾಡುತ್ತಾರೆ. ಬಳ್ಳಾರಿ ಶಾಸಕ ಜಿ. ಸೋಮಶೇಖರ ರೆಡ್ಡಿ ಮಂತ್ರಿಯಲ್ಲ. ಹೀಗಾಗಿ ಅವರನ್ನು ಬಳ್ಳಾರಿ ಉಸ್ತುವಾರಿ ಮಂತ್ರಿಯನ್ನಾಗಿಸಲು ಬರೋದಿಲ್ಲ. ನೋಡೋಣ ಒಂದು ವೇಳೆ ಮುಖ್ಯಮಂತ್ರಿಗಳು ಸೋಮಶೇಖರ ರೆಡ್ಡಿ ಅವರನ್ನು ಮಂತ್ರಿ ಮಾಡಿದರೆ ಅವರೇ ಬಳ್ಳಾರಿ ಜಿಲ್ಲಾ ಉಸ್ತುವಾರಿ ವಹಿಸಿಕೊಳ್ಳಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸಚಿವ ಶ್ರೀರಾಮುಲು, ಶಾಸಕ ಸೋಮಶೇಖರ ರೆಡ್ಡಿ ಜತೆ ನನಗೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ನಾವು ಚೆನ್ನಾಗಿಯೇ ಇದ್ದೇವೆ ಎಂದು ಇದೇ ವೇಳೆ ಸಚಿವ ಸಿಂಗ್‌ ಸ್ಪಷ್ಟಪಡಿಸಿದರು.

About The Author

Leave a Reply

Your email address will not be published. Required fields are marked *