ಮೈಸೂರು ಹುಲಿ ಟಿಪ್ಪುಸುಲ್ತಾನ್ರವರ ೨೨೮ ನೇ ಗಂಧ ಮತ್ತು ಉತ್ಸವ….
1 min readಚಿತ್ರದುರ್ಗ:
ಮೈಸೂರು ಹುಲಿ ಟಿಪ್ಪುಸುಲ್ತಾನ್ರವರ ೨೨೮ ನೇ ಗಂಧ ಮತ್ತು ಉತ್ಸವವನ್ನು ಬಡಾಮಕಾನ್ನಲ್ಲಿ ಸೋಮವಾರ ಸರಳವಾಗಿ ಆಚರಿಸಲಾಯಿತು.
ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ ಟಿಪ್ಪುರವರ ಚಿತ್ರಕ್ಕೆ ಪುಷ್ಪಹಾರ ಹಾಕಿ ಮಾತನಾಡುತ್ತ ಪ್ರತಿ ವರ್ಷವೂ ಶ್ರೀರಂಗಪಟ್ಟಣದಲ್ಲಿ ಟಿಪ್ಪುಸುಲ್ತಾನ್ರವರ ಗಂಧ ಮತ್ತು ಉತ್ಸವವನ್ನು ಅತಿ ವಿಜೃಂಭಣೆಯಿಂದ ಆಚರಿಸಲಾಗುತ್ತಿತ್ತು. ಆದರೆ ಈಗ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಾದ್ಯಂತ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಟಿಪ್ಪುರವರ ೨೨೮ ನೇ ಗಂಧ ಮತ್ತು ಉತ್ಸವವನ್ನು ಸರಳವಾಗಿ ಆಚರಿಸಿ ಗೌರವ ಸಲ್ಲಿಸಲಾಯಿತು ಎಂದು ಹೇಳಿದರು.
ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯ ಉಪಾಧ್ಯಕ್ಷ ಶಫಿವುಲ್ಲಾ, ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ ಶಬ್ಬೀರ್ ಅಹಮದ್, ಸೈಯದ್ ಇಸ್ಮಾಯಿಲ್, ಜಿಲ್ಲಾ ಉಪಾಧ್ಯಕ್ಷ ಸೈಯದ್ ಶಾಬಾಜ್ ಸುಲ್ತಾನ್, ಯುವ ಘಟಕದ ದಾದಾಪೀರ್ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಟಿಪ್ಪುರವರ ಗಂಧ ಮತ್ತು ಉತ್ಸವಕ್ಕಾಗಿ ಸಿಹಿ ವಿತರಿಸಲಾಯಿತು.