May 1, 2024

Chitradurga hoysala

Kannada news portal

ಹಿರಿಯೂರು ಬಳಿ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ.

1 min read

ಹಿರಿಯೂರು : ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಇರುವ ಸ್ನೇಹ ಫೀಡ್ ಫ್ಯಾಕ್ಟರಿ ಮುಂದೆ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಸಫಾರಿ ಕಾರಿನ ಚಾಲಕನ ಅತಿವೇಗ ಮತ್ತು ಅಜಾಗರುಕತೆಯಿಂದ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬೆಂಗಳೂರಿನಿಂದ ಹೊಸದುರ್ಗ ಕಡೆ ಬರುವಾಗ ಸಫಾರಿ ಕಾರಿನ ಚಾಲಕನು ಮತ್ತೊಂದು ಕಾರನ್ನು ಓವರ್ ಟೇಕ್ ಮಾಡುವಾಗ ಕಾರಿಗೆ ಡಿಕ್ಕಿ ಹೊಡೆದು ನಂತರ ಡಿವೈಡರ್ ದಾಟಿ ಇಚಾರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.
ಸಫಾರಿ ಕಾರಿನಲ್ಲಿದ್ದ ನೇಮಿರಾಜ್ (57), ಬಿ.ಕೆ. ನಂದಾ ಗೃಹಿಣಿ(55) ಹಾಗೂ ಲಾರಿ ಚಾಲಕ ರಂಗ (35) ಮೃತಪಟ್ಟಿದ್ದಾರೆ. ಸಫಾರಿ ಕಾರಿನ ಚಾಲಕ ಕೇಶವ್, ಮತ್ತೊಬ್ಬ ಉಮೇಶ್ ಎಂಬುವರು ಗಾಯಗೊಂಡಿದ್ದು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದ ತಕ್ಷಣ ಹಿರಿಯೂರು ಗ್ರಾಮಾಂತರ ಸಿಪಿಐ ರಾಘವೇಂದ್ರ, ಪಿಎಸ್ಐ ಪರಮೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *