ನಾನು ಗುಣಮುಖವಾಗಿ ಆರೋಗ್ಯವಾಗಿದ್ದೇನೆ, ಆತಂಕ ಪಡಬೇಡಿ,ಶೀಘ್ರ ಕ್ಷೇತ್ರಕ್ಕೆ ಮರಳುವೆ :ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ
1 min readಚಿತ್ರದುರ್ಗ:ಯಾರು ಭಯ ಬೀಳುವ ಅವಶ್ಯಕತೆ ಇಲ್ಲ. ನಾನು ಆರೋಗ್ಯವಾಗಿದ್ದೇನೆ. ಗುಣಮುಖವಾಗಿ ಶೀಘ್ರವಾಗಿ ಕ್ಷೇತ್ರಕ್ಕೆ ಬರುತ್ತೇನೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರು ನ್ಯೂಸ್ 19 ಕನ್ನಡದ ಜೊತೆ ಮಾತನಾಡಿದ್ದಾರೆ.
ಕೋವಿಡ್ ಪಾಸಿಟಿವ್ ಹಿನ್ನಲೆಯಲ್ಲಿ ಕಳೆದ ಐದು ದಿನಗಳಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಶಾಸಕರು ನನ್ನ ಆರೋಗ್ಯ ಸ್ಥಿರವಾಗಿದೆ. ಕ್ಷೇತ್ರದ ಜನರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ನನಗೆ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು ಆರೋಗ್ಯವಾಗಿದ್ದೇನೆ. ಸಿರಿಗೆರೆ ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು, ಭೋವಿ ಗುರುಪೀಠದ ಶ್ರೀಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸೇರಿ ಹಲವು ಮಠಗಳ ಮಠಾಧೀಶರು ನನಗೆ ದೂರವಾಣಿ ಕರೆ ಮಾಡಿ ಆತ್ಮ ವಿಶ್ವಾಸ ತುಂಬಿದ್ದಾರೆ ಎಂದರು.
ಸಿರಿಗೆರೆ ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ವಿಶೇಷ ಮುತುವರ್ಜಿಯಿಂದ ಆಸ್ಪತ್ರೆಯಿಂದ ಪ್ರತಿ ಹಂತದ ಮಾಹಿತಿ ಪಡೆದುಕೊಂಡು ಹೆಚ್ಚಿನದಾಗಿ ಸಹಕರಿಸಿದ್ದಾರೆ. ನನ್ನ ಕ್ಷೇತ್ರದ ಜನರು, ಅಭಿಮಾನಿಗಳು, ಬೆಂಬಲಿಗರು ಹಲವು ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎಲ್ಲಾರಿಗೂ ನಾನು ಋಣಿಯಾಗಿರುತ್ತೇನೆ. ಭಾನುವಾರ ಆಸ್ಪತ್ರೆಯಿಂದ ಡಿಶ್ಚರ್ಜ್ ಮಾಡುತ್ತೇವೆ ಎಂದು ವೈದ್ಯರು ತಿಳಿಸಿದ್ದಾರೆ. ವೈದ್ಯರ ಸಲಹೆ ಪಡದು ಕ್ಷೇತ್ರಕ್ಕೆ ಬರುತ್ತೇನೆ ಎಂದು ತಿಳಿಸಿದರು.