May 3, 2024

Chitradurga hoysala

Kannada news portal

ಲೋಕಾಯುಕ್ತ ಅಧಿಕಾರಿಗಳ ಪ್ರವಾಸ

1 min read

ಚಿತ್ರದುರ್ಗ,ಏಪ್ರಿಲ್17:
ಕರ್ನಾಟಕ ಲೋಕಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಏಪ್ರಿಲ್ 19 ರಂದು ಚಳ್ಳಕೆರೆ ಹಾಗೂ ಹಿರಿಯೂರು, ಏಪ್ರಿಲ್ 20 ರಂದು ಮೊಳಕಾಲ್ಮೂರು ಹಾಗೂ ಏಪ್ರಿಲ್ 21ರಂದು ಹೊಸದುರ್ಗ ಮತ್ತು ಹೊಳಲ್ಕೆರೆ ಪ್ರವಾಸ ಹಮ್ಮಿಕೊಂಡಿದ್ದಾರೆ.
ಏಪ್ರಿಲ್ 19 ರಂದು ಬೆಳಿಗ್ಗೆ 11 ರಿಂದ 1.30 ರವರೆಗೆ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ ಹಾಗೂ ಹಿರಿಯೂರು ತಾಲ್ಲೂಕು ಕಚೇರಿಯಲ್ಲಿ ಮಧ್ಯಾಹ್ನ 3 ರಿಂದ 5.30 ರವರೆಗೆ ಪೊಲೀಸ್ ನಿರೀಕ್ಷಕರು ಸಾರ್ವಜನಿಕರಿಂದ ದೂರು, ಅಹವಾಲುಗಳನ್ನು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವೀಕರಿಸುವರು.
ಏಪ್ರಿಲ್ 20 ರಂದು ಮೊಳಕಾಲ್ಮೂರು ತಾಲ್ಲೂಕು ಪಂಚಾಯಿತಿಯಲ್ಲಿ ಬೆಳಿಗ್ಗೆ 11 ರಿಂದ 1.30 ರವರೆಗೆ ಪೊಲೀಸ್ ಉಪಾಧೀಕ್ಷಕರು ಹಾಗೂ ಏಪ್ರಿಲ್ 21ರಂದು ಬೆಳಿಗ್ಗೆ 11 ರಿಂದ 1.30 ರವರೆಗೆ ಹೊಸದುರ್ಗ ತಾಲ್ಲೂಕು ಕಚೇರಿಯಲ್ಲಿ ಮತ್ತು ಮಧ್ಯಾಹ್ನ 3 ರಿಂದ 5.30 ರವರೆಗೆ ಹೊಳಲ್ಕೆರೆ ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು ಸಾರ್ವಜನಿಕರಿಂದ ದೂರು ,ಅಹವಾಲುಗಳನ್ನು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವೀಕರಿಸುವರು.
 ಸರ್ಕಾರವು ಸಾರ್ವಜನಿಕರಿಗಾಗಿ ರೂಪಿಸಲಾಗಿರುವ ಆನೇಕ ಯೋಜನೆಗಳನ್ನು ಅನುಷ್ಠಾನಗೊಳಿಸದೇ ಇರುವುದು ಮತ್ತು ಅಂತಹ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಸರ್ಕಾರಿ ಅಧಿಕಾರಿಗಳು ಅನಾವ್ಯಶಕ ವಿಳಂಬ ಮಾಡುತ್ತಿರುವುದು, ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷತನ ಮತ್ತು ತಾರತಮ್ಯ ತೋರುವುದು, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಲಾಭ ಸರಿಯಾದ ರೀತಿಯಲ್ಲಿ ತಲುಪಿಸದೇ ಇರುವುದು ಮತ್ತು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲವು ಸಾರ್ವಜನಿಕ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿ ದೂರಾಡಳಿತ ನಡೆಸುತ್ತಿರುವುದು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ  ನಮೂನೆ 1 ಮತ್ತು 2 ರಲ್ಲಿ ಬೆಂಗಳೂರಿನ ಕರ್ನಾಟಕ ಲೋಕಯುಕ್ತಕ್ಕೆ ದೂರು ಸಲ್ಲಿಸಬಹುದು.
ಯಾವುದೇ ನ್ಯಾಯಲಯಗಳಲ್ಲಿ ಹಾಲಿ ವಿಚಾರಣೆಯಲ್ಲಿರುವ ಪ್ರಕರಣಗಳ ಕುರಿತು ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *