ಕ್ರಿಕೆಟ್ ಬೆಟ್ಟಿಂಗ್ ; ಹಿರಿಯೂರು ನಗರಸಭೆ ಸದಸ್ಯ ಜಗದೀಶ್ ಬಂಧನ
1 min readಚಿತ್ರದುರ್ಗ : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದವರ ಮೇಲೆ ಖಚಿತ ಮಾಹಿತಿ ಮೇರೆಗೆ ಪೋಲಿಸರು ಮಿಂಚಿನ ಕಾರ್ಯಾಚರಣೆ ದಾಳಿ ನಡೆಸಿ, ಮಾಜಿ ಸಚಿವ ಡಿ ಸುಧಾಕರ್ ಬೆಂಬಲಿಗ ಹಾಗೂ ನೂತನ ನಗರಸಭೆ ಸದಸ್ಯ ಜಗದೀಶ್ ಸೇರಿದಂತೆ ನಾಲ್ವರನ್ನು ಬಂಧಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ನಡೆದಿದೆ.
ಶನಿವಾರ ರಾತ್ರಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವೆ ಐಪಿಎಲ್ ಪಂದ್ಯ ಏರ್ಪಟ್ಟಿತ್ತು. ಈ ಪಂದ್ಯಕ್ಕೆ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಕಳೆದ ತಿಂಗಳ ಹಿಂದೆ ನಗರಸಭೆಯ ಉಪಚುನಾವಣೆಯಲ್ಲಿ 15 ನೇ ವಾರ್ಡಿನ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಗದೀಶ್ 548 ಮತಗಳಿಂದ ಗೆಲುವು ಕಂಡಿದ್ದರು. ಈ ಸದಸ್ಯ ಗೆದ್ದು ತಿಂಗಳು ಕಳೆಯುವುದರೊಳಗೆ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ. ಇತನ ಜೊತೆಗೆ ಮಾರುತಿ, ಕಿರಣ್, ರವಿ ಅಲಿಯಾಸ್ ಉಂಡೆರವಿ ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳಿಂದ ನಗದು ವಶಪಡಿಸಿಕೊಳ್ಳಲಾಗಿದೆ. ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ನಾಲ್ವರ ವಿರುದ್ದ ಹಿರಿಯೂರು ನಗರ ಠಾಣೆಯಲ್ಲಿ ಪ್ರಕರಣ ನಡೆದಿದೆ.