April 26, 2024

Chitradurga hoysala

Kannada news portal

ನೂತನ ಆಂಬ್ಯುಲೆನ್ಸ್ ಗೆ ಚಾಲನೆ ನೀಡಿದ ಶಾಸಕ ಟಿ.ರಘುಮೂರ್ತಿ.

1 min read

ಚಳ್ಳಕೆರೆ ಆರೋಗ್ಯ ಇಲಾಖೆ ವತಿಯಿಂದ ಖರೀದಿಸಿರುವ ನೂತನ ಆಂಬ್ಯುಲೆನ್ಸ್ ಚಾಲನೆ ನೀಡಿದ ಶಾಸಕ ಟಿ ರಘುಮೂರ್ತಿ.

ಕೊರೋನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿತರ ಸುರಕ್ಷತಾ ಹಿತದೃಷ್ಟಿಯಿಂದ ನೂತನ ನೂತನ ಆಂಬ್ಯುಲೆನ್ಸ್ ಖರೀದಿ.

ಚಳ್ಳಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನೂತನ ಅಂಬ್ಯುಲೆನ್ಸ್ ಚಾಲನೆ.

ರಾಜ್ಯದಾದ್ಯಂತ ನಿಯಂತ್ರಣ ಮೀರಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿ ಮಾಡಿದೆ. ಈ ನಿಟ್ಟಿನಲ್ಲಿ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಟಿ ರಘುಮೂರ್ತಿ ರವರ ನೇತೃತ್ವದಲ್ಲಿ ತಾಲೂಕು
ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಹಲವು ಸಭೆಯನ್ನು ಕೈಗೊಂಡಿದ್ದು, ಕೋವಿಡ್ ಸೋಂಕಿತರ ಸುರಕ್ಷತಾ ಹಿತದೃಷ್ಟಿಯಿಂದ ಚಳ್ಳಕೆರೆ ಆರೋಗ್ಯ ಇಲಾಖೆ ವತಿಯಿಂದ ಖರೀದಿಸಿರುವ ನೂತನ ಆಂಬ್ಯುಲೆನ್ಸ್ ಗಳಿಗೆ ಚಾಲನೆ ನೀಡಿದರು.

ಇದೇ ವೇಳೆ ಕೋವಿಡ್ ನಿಯಂತ್ರಿಸಲು ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ, ತಾಲೂಕಿನಾದ್ಯಂತ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಡಾಕ್ಟರ್ ಪಾಲಾಕ್ಷಪ್ಪ ರವರು ತಾಲೂಕು ಮಟ್ಟದ ಆರೋಗ್ಯ ಇಲಾಖೆ ಅಧಿಕಾರಿಗಳು ತಾಸಿಲ್ದಾರ್ ಮಲ್ಲಿಕಾರ್ಜುನ್ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ಉಪಾಧ್ಯಕ್ಷರಾದ ಜೈ ತುಂಬಿ ಮಲಿಕ್ ಸಾಬ್ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಮೇಶ್ ಗೌಡರವರು ಸೇರಿದಂತೆ ಹಲವು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *