April 25, 2024

Chitradurga hoysala

Kannada news portal

ಸಾಣಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಟಿ.ರಘುಮೂರ್ತಿ ಭೇಟಿ.

1 min read

ಚಳ್ಳಕೆರೆ: ತಾಲೂಕಿನ ಸಾಣಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಟಿ ರಘುಮೂರ್ತಿ ಮೂರ್ತಿ ಭೇಟಿ ನೀಡಿ ಆರೋಗ್ಯ ಇಲಾಖೆ ಹಾಗೂ ಕೋವಿಡ್ ವಾರಿಯರ್ಸ್‌ ಗಳ ತಂಡದೊಂದಿಗೆ ಚರ್ಚೆ ನಡೆಸಿದರು.

ಕೋವಿಡ್ ಸ್ಥಿತಿಗತಿಗಳು ಬಗ್ಗೆ ಮಾಹಿತಿ ಪಡೆದ ಶಾಸಕರು ಸಾಣಿಕೆರೆ ಆರೋಗ್ಯ ಕೇಂದ್ರದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದ ಮಾತನಾಡಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸರಪಳಿಯನ್ನು ತಡೆಗಟ್ಟುವುದು ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಟಿ ರಘುಮೂರ್ತಿ ಅವರು ಇಂದು ಸಾಣಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಹಾಗೂ ಕೋವಿಡ್ ಸೋಂಕಿತರಿಗೆ ದೊರೆಯುತ್ತಿರುವ ಸೌಲಭ್ಯ ಮತ್ತು ವೃದ್ಧಾಪ್ಯ ವೇತನ ಪಡಿತರ ವಿತರಣೆ ಮತ್ತು ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ಹಳ್ಳಿಗಳ ಸ್ವಚ್ಛತೆ ಕೋವಿಡ್ ವ್ಯಕ್ತಿಗಳ ನಿಗಾ ಕುರಿತಂತೆ ಪರಿಶೀಲನೆ ನಡೆಸಿದರು. ಈ ಸಮಯದಲ್ಲಿ ತಹಸಿಲ್ದರ್ ಮಲ್ಲಿಕಾರ್ಜುನ್ ತಾಲೂಕು ಆರೋಗ್ಯಾಧಿಕಾರಿ ಗಳಾದ ಪ್ರೇಮಸುಧಾ , ತಾಲೂಕು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಕಾಶರವರು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ದೇವರಾಜ ಶಶಿಕಲಾ ಮತ್ತು ಗೋಪನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ರವರು ಹಾಜರಿದ್ದರು

ಈ ವೇಳೆ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಮಾನ್ಯ ಶಾಸಕರು, ಕೋವಿಡ್ ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

About The Author

Leave a Reply

Your email address will not be published. Required fields are marked *