April 18, 2024

Chitradurga hoysala

Kannada news portal

ಜಿಲ್ಲೆಯ 1360 ಗ್ರಾಮಗಳ ಪೈಕಿ 834 ಹಳ್ಳಿಗಳು ಕೋವಿಡ್ ಮುಕ್ತ, ಕೋವಿಡ್ ಕೇರ್ ಸೆಂಟರ್‍ಗೆ ಬಾರದವರ ಮನೆಗಳು ಸೀಲ್‍ಡೌನ್ -ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ.

1 min read

ಚಿತ್ರದುರ್ಗ:

ಜಿಲ್ಲೆಯಲ್ಲಿ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಹೋಂ ಐಸೋಲೇಷನ್‍ನಲ್ಲಿರುವವರನ್ನು ಕೋವಿಡ್ ಕೇರ್ ಸೆಂಟರ್‍ಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.

ಜಿಪಂ ಸಭಾಂಗಣದಲ್ಲಿ ಭಾನುವಾರ ನಡೆದ ಕೋವಿಡ್ ನಿಯಂತ್ರಣ ಕುರಿತ ಸಭೆಯಲ್ಲಿ ಅವರು ಮಾತನಾಡಿ, ಹೋಂ ಐಸೋಲೇಷನ್‍ನಲ್ಲಿರುವವರನ್ನು ಕೋವಿಡ್ ಕೇರ್ ಸೆಂಟರ್‍ಗೆ ಕರೆತರುವ ಕೆಲಸ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಕೆಲವು ಗ್ರಾಮಗಳಲ್ಲಿ ಅಧಿಕಾರಿಗಳ ಕ್ರಮಕ್ಕೆ ಅಡ್ಡಿಪಡಿಸದವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಕೋವಿಡ್ ಕೇರ್ ಸೆಂಟರ್‍ಗೆ ಬಾರದವರ ಮನೆಯನ್ನು ಸೀಲ್‍ಡೌನ್ ಮಾಡಲಾಗುತ್ತಿದೆ ಎಂದು ಹೇಳಿದರು.
834 ಹಳ್ಳಿಗಳು ಕೋವಿಡ್ ಮುಕ್ತ: ಜಿಲ್ಲೆಯ 1360 ಗ್ರಾಮಗಳಲ್ಲಿ 834 ಹಳ್ಳಿಗಳು ಕೋವಿಡ್ ಮುಕ್ತ ಹಳ್ಳಿಗಳಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಫಾಲಾಕ್ಷ ತಿಳಿಸಿದರು.
ಜಿಲ್ಲೆಯ 22 ಹಳ್ಳಿಗಳನ್ನು ಕೋವಿಡ್ ಹಾಟ್‍ಸ್ಪಾಟ್ ಹಳ್ಳಿಗಳೆಂದು ಗುರುತಿಸಲಾಗಿದೆ. ಇಂತಹ ಹಳ್ಳಿಗಳಿಗೆ ಜಿಲ್ಲಾಡಳಿತ ಹಳ್ಳಿಗಳಿಗೆ ಭೇಟಿ ನೀಡಿ ಕೋವಿಡ್ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಜಿಲ್ಲೆಯ ಗ್ರಾಮೀಣ ಪ್ರದೇಶಗಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಕಾರ್ಯಪಡೆ ಯಶಸ್ವಿಯಾಗಿ ಕಾರ್ಯನಿರ್ವಹಿಸಬೇಕು. ಕೋವಿಡ್ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‍ಗೆ ಸ್ಥಳಾಂತರಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *