ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಚಿತ್ರದುರ್ಗದಲ್ಲಿ ವಿನಾಯಿತಿ ನೀಡಿ ಲಾಕ್ಡೌನ್ ಮುಂದುವರೆಸಲು ಸೂಚಿಸಿದೆ ಎಂದು ಎಸ್ಪಿ ಜಿ.ರಾಧಿಕಾ ತಿಳಿಸಿದರು.ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿ
1 min readಚಿತ್ರದುರ್ಗ, (ಜೂ.20) : ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಚಿತ್ರದುರ್ಗದಲ್ಲಿ ವಿನಾಯಿತಿ ನೀಡಿ ಲಾಕ್ಡೌನ್ ಮುಂದುವರೆಸಲು ಸೂಚಿಸಿದೆ ಎಂದು ಎಸ್ಪಿ ಜಿ.ರಾಧಿಕಾ ತಿಳಿಸಿದರು.ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿ, ಲಾಕ್ಡೌನ್ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ. ಈ ಹೊಸ ಮಾರ್ಗಸೂಚಿಯು ಜೂನ್ 21ರಿಂದ ಜುಲೈ 5 ರವರೆಗೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
ಕೋವಿಡ್-19 ರೋಗ ತಡೆ ಮಾರ್ಗಸೂಚಿಗಳನ್ನು ಪರಿಷ್ಕರಿಸಿದ್ದು, ಕೆಲವೊಂದು ಚಟುವಟಿಕೆಗಳಿಗೆ ವಿನಾಯಿತಿ ನೀಡಿ ಆದೇಶಿಸಲಾಗಿರುತ್ತದೆ. ಜೂನ್ 21 ರ ಮುಂಜಾನೆ 5 ರಿಂದ ಜುಲೈ 5 ರ ಮುಂಜಾನೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ವಾರಾಂತ್ಯಕ್ಕೆ ಶುಕ್ರವಾರ ಸಂಜೆ 7 ರಿಂದ ಸೋಮವಾರ ಮುಂಜಾನೆ 5 ರವರೆಗೆ ವಾರಾಂತ್ಯ ಕಫ್ರ್ಯೂ ಹಾಗೂ ಪ್ರತಿ ದಿನ ಸಂಜೆ 7 ರಿಂದ ಮರು ದಿನ ಮುಂಜಾನೆ 5 ರವರೆಗೆ ರಾತ್ರಿ ಕಫ್ಯೂ ಜಾರಿಗೊಳಿಸಲಾಗಿದೆ.ಮೊದಲನೆಯದಾಗಿ ಶೇ.50ರಷ್ಟು ಸಿಬ್ಬಂದಿ ಬಳಸಿ ಸರ್ಕಾರಿ ಅಥವಾ ಸರ್ಕಾರೇತರ ಉತ್ಪಾದನ ಘಟಕಗಳು, ಕಾರ್ಖಾನೆಗಳನ್ನು ತೆರೆಯಲು ಮತ್ತು ಗಾರ್ಮೆಂಟ್ಸ್ ಗಳಲ್ಲಿ ಶೇ.30ರಷ್ಟು ಸಿಬ್ಬಂದಿಗೆ ಅವಕಾಶ ನೀಡಿ ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಿ ಕೆಲಸ ಮಾಡಬೇಕು.
ಆಹಾರ, ದಿನಸಿ, ಹಣ್ಣು ತರಕಾರಿ, ಮಾಂಸ, ಮೀನು, ಡೇರಿ ಉತ್ಪನ್ನಗಳು, ಹಾಲಿನ ಬೂತ್, ಪ್ರಾಣಿ ಆಹಾರ, ಬೀದಿ ಬದಿ ವ್ಯಾಪಾರ, ಪಡಿತರ ಅಂಗಡಿಗಳನ್ನು, ಬೀದಿ ಬದಿಯ ವ್ಯಾಪಾರಿಗಳನ್ನು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ತೆರೆಯಬಹುದು. ಕನ್ನಡಕದ ಅಂಗಡಿಗಳಿಗೂ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅನುಮತಿಸಲಾಗಿದೆ.