April 29, 2024

Chitradurga hoysala

Kannada news portal

ನಾಯಕನಹಟ್ಟಿ ಕುಡಿಯುವ ನೀರು ಸರಬರಾಜು ಕಾಮಗಾರಿಗಳ ಉದ್ಘಾಟನಾ ಸಮಾರಂಭ*

1 min read

*ನಾಯಕನಹಟ್ಟಿ ಕುಡಿಯುವ ನೀರು ಸರಬರಾಜು ಕಾಮಗಾರಿಗಳ ಉದ್ಘಾಟನಾ ಸಮಾರಂಭ*

ಚಿತ್ರದುರ್ಗ :
ನಗರಾಭಿವೃದ್ಧಿ ಇಲಾಖೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವತಿಯಿಂದ ವಾಣಿವಿಲಾಸ ಸಾಗರ ಜಲಾಶಯ ಮೂಲದಿಂದ ಹಿರಿಯೂರು, ಚಳ್ಳಕೆರೆ ಪಟ್ಟಣ, ಚಿತ್ರದುರ್ಗ ನಗರ, ಡಿಆರ್‍ಡಿಒ, ಐಐಎಸ್‍ಸಿ, ಬಿಎಆರ್‍ಸಿ, ಐಆರ್‍ಬಿ ಮತ್ತು ಮಾರ್ಗಮಧ್ಯದ 18 ಹಳ್ಳಿಗಳ ಸಂಯುಕ್ತ ನೀರು ಸರಬರಾಜು ಯೋಜನೆಯಡಿ ನಾಯಕನಹಟ್ಟಿ ಪಟ್ಟಣದಲ್ಲಿ ಕೈಗೊಂಡಿರುವ ರೂ.202.84 ಲಕ್ಷಗಳ ಕುಡಿಯುವ ನೀರು ಸರಬರಾಜು ಕಾಮಗಾರಿಗಳ ಉದ್ಘಾಟನಾ ಸಮಾರಂಭವನ್ನು ಜೂನ್ 30 ರಂದು ಸಂಜೆ 4ಕ್ಕೆ ನಾಯಕನಹಟ್ಟಿಯ ಪ್ರವಾಸಿ ಮಂದಿರ ಮುಂಭಾಗ ಹಮ್ಮಿಕೊಳ್ಳಲಾಗಿದೆ.

ಸಮಾಜ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಸಮಾರಂಭ ಉದ್ಘಾಟಿಸುವರು. ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ್ (ಬೈರತಿ) ಹಾಗೂ ಪೌರಾಡಳಿತ ಸಚಿವರಾದ ಎಂ.ಟಿ.ಬಿ.ನಾಗರಾಜ್ ಅವರು ಉಪಸ್ಥಿತರಿರುವರು.
ಹೊಳಲ್ಕೆರೆ ಶಾಸಕರು ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಂ.ಚಂದ್ರಪ್ಪ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ನರಸಿಂಹ ನಾಯಕ (ರಾಜುಗೌಡ), ಸಂಸದ ಎ.ನಾರಾಯಣಸ್ವಾಮಿ, ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ಗೂಳಿಹಟ್ಟಿ ಡಿ.ಶೇಖರ್, ಕೆ.ಪೂರ್ಣಿಮಾ ಕೆ.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ರಘುಆಚಾರ್, ಡಾ.ವೈ.ಎ.ನಾರಾಯಣಸ್ವಾಮಿ, ಚಿದಾನಂದ ಗೌಡ, ರಾಜ್ಯ ಖನಿಜ ನಿಗಮದ ಅಧ್ಯಕ್ಷರಾದ ಲಿಂಗಮೂರ್ತಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ನಗರಾಭಿವೃದ್ಧಿ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿದೇಶಕ ಟಿ.ಹೆಚ್.ಎಂ.ಕುಮಾರ್, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕ ಬಿ.ಬಿ.ಕಾವೇರಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿ.ಪಂ ಸಿಇಒ ಡಾ.ಕೆ.ನಂದಿನಿದೇವಿ, ಜಿಲ್ಲಾ ರಕ್ಷಣಾಧಿಕಾರಿ ಜಿ.ರಾಧಿಕಾ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮುಖ್ಯ ಅಭಿಯಂತರ ಎಸ್.ಎನ್.ದಿನೇಶ್, ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಎನ್.ಸತೀಶ್ ರೆಡ್ಡಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಪಾಲಕ ಅಭಿಯಂತರ ಜಿ.ಎಸ್.ಕುಮಾರಪ್ಪ, ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೋಡಿ ಭೀಮರಾಯ ಎನ್.ಟಿ. ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

About The Author

Leave a Reply

Your email address will not be published. Required fields are marked *