100 ತೆಂಗಿನ ಸಸಿ ನೆಡುವ ಕಾರ್ಯಕ್ಕೆ. ಶಿವಮೂರ್ತಿ ಮುರುಘಾ ಶರಣರು ಮತ್ತು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯಸ್ವಾಮೀಜಿ ಅವರ ಸಾರಥ್ಯದಲ್ಲಿ ಚಾಲನೆ .
1 min readಕಾಡು ಕಡಿಮೆಯಾಗಿ ಜನಸಂಖ್ಯೆ
ಹೆಚ್ಚಾದಂತೆ ಮನುಷ್ಯನಿಗೆ ಅಗತ್ಯವಾಗಿ
ಬೇಕಾಗಿರುವ ಜೀವವಾಯುಗೆ ಕೊರತೆ
ಉಂಟಾಗುತ್ತದೆ’ ಎಂದು ಹೇಳಿದರು.
`ಇಂತಹ ಪರಿಸ್ಥಿತಿಯಲ್ಲಿ ಜನರು ಹೆಚ್ಚು
ಜಾಗೃತಿ ವಹಿಸಬೇಕು. ಪ್ರತಿಯೊಬ್ಬರು
ಸಾಮರ್ಥ್ಯಕ್ಕೆ ಅನುಗುಣವಾಗಿ ಗಿಡ ನೆಟ್ಟು
ಪೆÇೀಷಣೆ ಮಾಡಬೇಕು. ಇದರಿಂದ
ಮತ್ತೊಬ್ಬರಿಗೆ ಸ್ಫೂರ್ತಿ ಸಿಗುತ್ತದೆ. ಈ
ನಿಟ್ಟಿನಲ್ಲಿ ಸ್ಮಾರಕದ ಆವರಣದಲ್ಲಿ ತೆಂಗಿನ
ಸಸಿಗಳನ್ನು ನೆಡಲಾಗಿದೆ. ಎಲ್ಲವನ್ನೂ
ನೀಡುವ ಕಲ್ಪವೃಕ್ಷವನ್ನು ಬೆಳೆಸಿದರೆ ಮುಂದೆ
ಈ ಮರ ಮಾನವನನ್ನು ಸಾಕುತ್ತದೆ.
ಮುಂಗಾರು ಮಳೆಯ ಸಂದರ್ಭದಲ್ಲಿ
ಎಲ್ಲರೂ ಗಿಡ ಬೆಳೆಸಬೇಕು’ ಎಂದರು.
ಇಂದಿನ `ಪರಿಸರ
ಮಾಲಿನ್ಯವನ್ನು ತಡೆಯಲು ಹಸಿರೀಕರಣ
ಅತ್ಯಗತವಾಗಿದೆ. ಇತ್ತೀಚೆಗೆ ಬೆಳೆದು
ನಿಂತ ಮರಗಳನ್ನು ಕಡಿಯುವುದು
ಹೆಚ್ಚಾಗುತ್ತಿದೆ. ಆದರೆ ಗಿಡ ನೆಡುವ
ಸಂಸ್ಕøತಿ ಕ್ಷೀಣಿಸುತ್ತಿದೆ. ಮರ ಹನನದ
ಪ್ರಮಾಣಕ್ಕೆ ಅನುಗುಣವಾಗಿ ಸಸಿ ನೆಡುವ
ಕಾರ್ಯವೂ ಸಾಗಬೇಕು. ಪರಿಸರ
ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು’ ಎಂದು
ಶಿವಮೂರ್ತಿ ಮುರುಘಾ ಶರಣರು
ಸಲಹೆ ನೀಡಿದರು.
ಎಸ್.ನಿಜಲಿಂಗಪ್ಪ ಸ್ಮಾರಕ ಟ್ರಸ್ಟ್ ಗೌರವ
ಕಾರ್ಯದರ್ಶಿ ಎಚ್.ಹನುಮಂತಪ್ಪ,
ಸಂಯೋಜಕ ಕೆಇಬಿ ಷಣ್ಮುಖಪ್ಪ,
ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ
(ಕುಡಾ) ಅಧ್ಯಕ್ಷ ಟಿ.ಬದರಿನಾಥ್, ಕಾಂಗ್ರೆಸ್
ಮುಖಂಡ ಜಿ.ಎಸ್.ಮಂಜುನಾಥ್,
ಇತಿಹಾಸ ತಜ್ಞ ಡಾ.ಬಿ.ರಾಜಶೇಖರಪ್ಪ,
ವೀರಶೈವ ಮಹಾಸಭಾದ ಜಿಲ್ಲಾ ಘಟಕದ
ಅಧ್ಯಕ್ಷ ಮಹಡಿ ಶಿವಮೂರ್ತಿ ಇದ್ದರು.