March 28, 2024

Chitradurga hoysala

Kannada news portal

ಕಾಂಗ್ರೆಸ್ ಮುಖಂಡ ಜಿ.ಎಸ್.ಮಂಜುನಾಥ್ ಹುಟ್ಟುಹಬ್ಬ ಆಚರಿಸಲು ನಿರ್ಧಾರ:ಜಿ ಎಲ್ ಮೂರ್ತಿ….

1 min read

ಕಾಂಗ್ರೆಸ್ ಮುಖಂಡ ಜಿ.ಎಸ್.ಮಂಜುನಾಥ್ ಹುಟ್ಟುಹಬ್ಬ ಆಚರಿಸಲು ನಿರ್ಧಾರ:ಜಿ ಎಲ್ ಮೂರ್ತಿ….

ಹಿರಿಯೂರು:
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್ ಬಡವರ ಬಂಧು ಯುವಕರ ಕಣ್ಮಣಿಯಾಗಿದ್ದು ಅವರ ಹುಟ್ಟು ಹಬ್ಬ ಇದೇ ಜುಲೈ 9 ರ ರಂದು ಜಿಎಸ್ ಮಂಜುನಾಥ್ ಅಭಿಮಾನಿ ಬಳಗದ ವತಿಯಿಂದ ಹಿರಿಯೂರಿನ ಶ್ರೀತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಮಂಜುನಾಥ್ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷರಾದ ಜಿ ಎಲ್ ಮೂರ್ತಿ ಗೊರ್ಲಡಕು ತಿಳಿಸಿದರು.
ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಮಾತನಾಡಿ ಮಂಜುನಾಥ್ ರವರ ರಾಜಕೀಯ ಶ್ರೇಯೋಭಿವೃದ್ಧಿಗಾಗಿ ,ಉತ್ತಮ ಆರೋಗ್ಯ ನೀಡುವಂತೆ ವಿಶೇಷ ಪೂಜೆ . ಇದೇ ಸಂದರ್ಭದಲ್ಲಿ ಹಿರಿಯೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು ಹಣ್ಣು ಬ್ರೇಡ್ ವಿತರಣೆ , ಭೀಮನಬಂಡೆ ಯ ವೃದ್ಧಾಶ್ರಮದಲ್ಲಿ ವಯೋವೃದ್ಧರಿಗೆ ಊಟದ ವ್ಯವಸ್ಥೆ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಕಾರ್ಯಕರ್ತರು, ಜಿ ಎಸ್ ಮಂಜುನಾಥ್ ಅಭಿಮಾನಿಗಳು ಭಾಗವಹಿಸಬೇಕು ಎಂದು ಜಿ ಎಲ್ ಮೂರ್ತಿ ಮನವಿ ಮಾಡಿದ್ದಾರೆ.

About The Author

Leave a Reply

Your email address will not be published. Required fields are marked *