ಸಂಸದ ಎ.ನಾರಾಯಣಸ್ವಾಮಿ ಯವರಿಗೆ ಕೇಂದ್ರ ಸಚಿವ ಸ್ಥಾನ, ಸಂಭ್ರಮಿಸಿದ ಸಮುದಾಯದ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು….
1 min readಸಂಸದ ಎ.ನಾರಾಯಣಸ್ವಾಮಿ ಯವರಿಗೆ ಕೇಂದ್ರ ಸಚಿವ ಸ್ಥಾನ, ಸಂಭ್ರಮಿಸಿದ ಸಮುದಾಯದ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು….
ಚಿತ್ರದುರ್ಗ:
ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಕೇಂದ್ರ ಸಚಿವರಾಗಿರುವುದಕ್ಕೆ ಮಾದಿಗ ಸಮಾಜದವರು ಮತ್ತು ಬಿಜೆಪಿ ಪಕ್ಷದ ವತಿಯಿಂದ ಒನಕೆ ಓಬವ್ವ ವೃತ್ತದಲ್ಲಿ ಪ್ರತ್ಯೇಕವಾಗಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಮಾದಿಗ ಮಹಾಸಭಾ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗ ಮಾತನಾಡಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿ ಒಮ್ಮೆ ಸಮಾಜ ಕಲ್ಯಾಣ ಮಂತ್ರಿಯಾಗಿ ಅನೇಕ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಅಭಿವೃದ್ದಿಯ ಹರಿಕಾರ ಎನಿಸಿಕೊಂಡ ಎ.ನಾರಾಯಣಸ್ವಾಮಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪಾರ್ಲಿಮೆಂಟ್ ಪ್ರವೇಶಿಸಿ ಈಗ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿರುವುದು ನಿಜಕ್ಕೂ ಮಾದಿಗ ಸಮಾಜಕ್ಕೆ ಸಾಮಾಜಿಕ ನ್ಯಾಯ ಒದಗಿಸಿದಂತಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ಜಾತಿಗಳ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಮೋದಿರವರು ಎ.ನಾರಾಯಣಸ್ವಾಮಿಗೆ ಕೇಂದ್ರ ಸಚಿವ ಸ್ಥಾನ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.
ಮಾದಿಗ ಸಮಾಜದ ಮುಖಂಡರುಗಳಾದ ದೇವರಾಜ್ ನಗರಂಗೆರೆ, ಗುತ್ತಿಗೆದಾರ ಲಕ್ಷ್ಮಣ್ ಡಿ.ಎಸ್.ಹಳ್ಳಿ, ಬಸವರಾಜ್, ಬಿ.ಆರ್.ಸತೀಶ್, ಆರ್.ಮೈಲೇಶಿ, ನ್ಯಾಯವಾದಿ ಎಸ್.ತಿಪ್ಪೇಸ್ವಾಮಿ ಹಾಗೂ ಮಾದಿಗ ಸಮಾಜದ ಮುಖಂಡರುಗಳು, ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬದರಿನಾಥ್, ನಗರ ಘಟಕದ ಪ್ರಧಾನ ಕಾರ್ಯದರ್ಶಿ ಭಾನುಪ್ರಕಾಶ್, ನಗರಸಭಾ ಸದಸ್ಯ ಹರೀಶ್, ಮುಖಂಡರಾದ ವೆಂಕಟೇಶ್ ಯಾದವ್, ಶಿವಪ್ರಕಾಶ್ ದಗ್ಗೆ, ನಾಗರಾಜ್ ಬೇದ್ರೆ, ಶಂಭು, ಕಾರ್ತಿಕ್, ಪ್ರಸನ್ನ, ಎನ್.ಕೃಷ್ಣ, ಸೋಮಶೇಖರ್, ಜಯಣ್ಣ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.