ಪಬ್ಲಿಕ್ ಟಿವಿ ಕ್ಯಾಮೆರಾಮನ್ ದಿ|| ಬಸವರಾಜು ಕೋಟಿ ಮನೆಗೆ ತೆರಳಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ:ಕಾಂಗ್ರೆಸ್ ಮುಖಂಡ ಜಿ.ಎಸ್.ಮಂಜುನಾಥ್
1 min readಚಿತ್ರದುರ್ಗ:ಪಬ್ಲಿಕ್ ಟಿವಿ ಕ್ಯಾಮೆರಾಮನ್ ದಿ|| ಬಸವರಾಜು ಕೋಟಿ ಮನೆಗೆ ತೆರಳಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ:ಕಾಂಗ್ರೆಸ್ ಮುಖಂಡ ಜಿ.ಎಸ್.ಮಂಜುನಾಥ್
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ರಾಜ್ಯಾಧ್ಯಕ್ಷರಾದ ಜಿ.ಎಸ್. ಮಂಜುನಾಥ್ ರವರ ಹುಟ್ಟುಹಬ್ಬದ ಪ್ರಯುಕ್ತ ಕೋವಿಡ್ ನಿಂದ ಮೃತಪಟ್ಟಿದ್ದ ಪಬ್ಲಿಕ್ ಟಿವಿಯ ಕ್ಯಾಮೆರಾಮನ್ ಬಸವರಾಜು ಕೋಟಿ ಅವರ ಮನೆಗೆ ತೆರಳಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ ಧನ ಸಹಾಯ ಮಾಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕರಾದ ಜಿ.ಬಿ.ಬಾಲಕೃಷ್ಣಸ್ವಾಮಿ ಯಾದವ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್ ಅಸಂಘಟಿತ ಕಾರ್ಮಿಕರ ಜಿಲ್ಲಾಧ್ಯಕ್ಷ ಮೋಹನ್ ಪೂಜಾರಿ, ಇಂಟೆಕ್ ಜಿಲ್ಲಾಧ್ಯಕ್ಷ ಅಶೋಕ ನಾಯ್ಡು, ಪದವಿಧರ ಶಿಕ್ಷಣ ವಿಭಾಗದ ಅಧ್ಯಕ್ಷ ಮುದಸಿರ್ ನವಾಜ್, ಅಸಂಘಟಿತ ಕಾರ್ಮಿಕ ರಾಜ್ಯ ಕಾರ್ಯದರ್ಶಿ ಎ ಅಶ್ರಫಆಲಿ, ಮುನಿರಾಜು, ಯುವ ಕಾಂಗ್ರೆಸ್ ನ ಸಂದೀಪ್ ಮುಂತಾದವರು ಉಪಸ್ಥಿತರಿದ್ದರು.